ಬೆಂಗಳೂರು: ರಾಜ್ಯದ ಅಣೆಕಟ್ಟೆಗಳ ಸಬಲೀಕರಣಕ್ಕೆ ಕೇಂದ್ರದಿಂದ ₹700 ಕೋಟಿ ಅನುದಾನ ಕೇಳಿರುವುದಾಗಿ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮಾಹಿತಿ ನೀಡಿದರು.
ದೆಹಲಿಯಿಂದ ವಾಪಾಸ್ ಆದ ಬಳಿಕ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದರು. ಕೇಂದ್ರದ ಜಲಶಕ್ತಿ ಸಚಿವರ ಜತೆ ನಡೆದ ಮಾತುಕತೆಯ ವಿವರಗಳನ್ನೂ ನೀಡಿದರು.
ಶನಿವಾರ ತಮ್ಮನ್ನು ಭೇಟಿಯಾದ ಶಾಸಕರ ಜತೆ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಲು ಪಕ್ಷ ನಡೆಸುತ್ತಿರುವ ಗ್ರಾಮ ಸ್ವರಾಜ್ಯ ಸಮಾವೇಶಗಳ ಕುರಿತು ಚರ್ಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.