ADVERTISEMENT

ಮದುವೆ, ಸಾರ್ವಜನಿಕ ಕಾರ್ಯಕ್ರಮಗಳಿಗೆ ನಿರ್ಬಂಧ ಹಾಕಿ: ರಮೇಶ್‌ಕುಮಾರ್‌

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2020, 23:15 IST
Last Updated 24 ಸೆಪ್ಟೆಂಬರ್ 2020, 23:15 IST
ಕೆ.ಆರ್‌.ರಮೇಶ್‌ಕುಮಾರ್‌
ಕೆ.ಆರ್‌.ರಮೇಶ್‌ಕುಮಾರ್‌   

ಬೆಂಗಳೂರು: ಕೋವಿಡ್‌ ನಿಯಂತ್ರಣಕ್ಕೆ ಬರುವವರೆಗೆ ಮದುವೆ ಮತ್ತು ಇತರ ಸಾರ್ವಜನಿಕ ಕಾರ್ಯಕ್ರಮಗಳನ್ನು ನಿಲ್ಲಿಸಬೇಕು ಎಂದು ಕಾಂಗ್ರೆಸ್‌ನ ಕೆ.ಆರ್‌.ರಮೇಶ್‌ಕುಮಾರ್‌ ಸರ್ಕಾರಕ್ಕೆ ಮನವಿ ಮಾಡಿದರು.

ವಿಧಾನಸಭೆಯಲ್ಲಿ ಮಾತನಾಡಿದ ಅವರು, ‘ಜನಕ್ಕೆ ಭಯವೂ ಇಲ್ಲ, ತಿಳಿವಳಿಕೆಯೂ ಇಲ್ಲ. ಬೇಕಾಬಿಟ್ಟಿ ಒಂದು ಕಡೆ ಸೇರುತ್ತಾರೆ ಅಪಾಯಕ್ಕೆ ಸಿಲುಕುತ್ತಾರೆ. ನಮ್ಮ ಬಳಿ ಬಂದಾಗ ಬರಬೇಡಿ ಎಂದು ಹೇಳಲೂ ಆಗುವುದಿಲ್ಲ. ಮದುವೆ ಮತ್ತು ಸಾರ್ವಜನಿಕ ಸಮಾರಂಭಗಳಿಂದ ವೈರಾಣು‌ ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿದೆ’ ಎಂದರು.

‘ಬೀಗರೂಟ ಎಂದು ನೂರಾರು ಜನ ಸೇರುತ್ತಾರೆ. ಈ ಜನಕ್ಕೆ ಹೇಗೆ ತಿಳಿ ಹೇಳಬೇಕು ಎಂಬುದು ಗೊತ್ತಾಗುವುದಿಲ್ಲ. ಆದ್ದರಿಂದ ಹೆಚ್ಚು ಜನ ಸೇರುವ ಕಾರ್ಯಕ್ರಮಗಳಿಗೆ ಅನುಮತಿ ನೀಡಬಾರದು’ ಎಂದು ಅವರು ಮುಖ್ಯಮಂತ್ರಿಯವರನ್ನು ಮನವಿ ಮಾಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.