
ಪ್ರಜಾವಾಣಿ ವಾರ್ತೆಬೆಂಗಳೂರು: ನಾಗರಿಕರು ಹಾಗೂ ಪಾಲಿಕೆ ಸಿಬ್ಬಂದಿಯ ಪ್ರತಿಭಟನೆಗೆ ಮಣಿದ ಸರ್ಕಾರ, ಬಿಬಿಎಂಪಿ ಹೆಚ್ಚುವರಿ ಆಯುಕ್ತ (ಆಡಳಿತ) ರಂದೀಪ್ ಅವರ ವರ್ಗಾವಣೆಯನ್ನು ಬುಧವಾರ ರದ್ದುಪಡಿಸಿದೆ.
ಐಎಎಸ್ ಅಧಿಕಾರಿ ರಂದೀಪ್ ಅವರು ಆರು ತಿಂಗಳ ಹಿಂದೆ ಪಾಲಿಕೆಯಲ್ಲಿ ಅಧಿಕಾರ ವಹಿಸಿಕೊಂಡಿದ್ದರು. ಅವರನ್ನು ಸಮಾಜ ಕಲ್ಯಾಣ ಇಲಾಖೆ ಆಯುಕ್ತರನ್ನಾಗಿ ವರ್ಗ ಮಾಡಿ ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ ನ.30ರಂದು ಆದೇಶ ಹೊರಡಿಸಿತ್ತು.
ಕಸ ವಿಲೇವಾರಿ ವ್ಯವಸ್ಥೆಯಲ್ಲಿ ಅನೇಕ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಿದ್ದರಂದೀಪ್ ಅವರನ್ನು ಪಾಲಿಕೆಯಲ್ಲೇ ಉಳಿಸಿಕೊಳ್ಳುವ ಸಲುವಾಗಿ ಆನ್ಲೈನ್ ಸಹಿ ಸಂಗ್ರಹ ಅಭಿಯಾನ ನಡೆದಿತ್ತು. ಅವರ ವರ್ಗಾವಣೆ ರದ್ದುಪಡಿಸಬೇಕು ಎಂದು ಒತ್ತಾಯಿಸಿ ಪಾಲಿಕೆಯ ಅಧಿಕಾರಿಗಳ ಹಾಗೂ ನೌಕರರ ಕ್ಷೇಮಾಭಿವೃದ್ಧಿ ಸಂಘದವರು ಪಾಲಿಕೆ ಕೇಂದ್ರ ಕಚೇರಿ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.