ಬೆಂಗಳೂರು: ಕೆಲಸ ಕೊಡಿಸುವುದಾಗಿ ಹೇಳಿ ಪರಿಚಯ ಮಾಡಿಕೊಂಡು ಅತ್ಯಾಚಾರ ಎಸಗಿರುವ ಆರೋಪದಡಿ ಸಾಗರ್ ಗೌಡ ಎಂಬುವರನ್ನು ಚಂದ್ರಾಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
‘ಮಂಡ್ಯದ ಸಾಗರ್, ನಗರದಲ್ಲಿ ಆಹಾರ ಪೂರೈಕೆ ಕೆಲಸ ಮಾಡುತ್ತಿದ್ದರು. ಸಂತ್ರಸ್ತ ಯುವತಿ ನೀಡಿರುವ ದೂರು ಆಧರಿಸಿ ಅವರನ್ನು ಬಂಧಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
‘ಸಂಬಂಧಿಯೊಬ್ಬರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ ಆರೋಪಿ, ನಂತರ ಸ್ನೇಹ ಬೆಳೆಸಿದ್ದರು. ಕೆಲಸ ಕೊಡಿಸುವುದಾಗಿ ಹೇಳಿ ರೆಸ್ಯುಮೆ ಪಡೆದಿದ್ದರು. ನಂತರ, ಇಬ್ಬರು ಪರಸ್ಪರ ಮಾತನಾಡಲಾರಂಭಿಸಿದ್ದರು. ಪ್ರೀತಿಯೂ ಹುಟ್ಟಿತ್ತು. ಸಂಬಂಧಿಕರ ಮನೆಗೆ ಕರೆದೊಯ್ದಿದ್ದ ಆರೋಪಿ, ಪಾನಿಯದಲ್ಲಿ ಮತ್ತು ಬರುವ ಔಷಧಿ ಬೆರೆಸಿ ಕುಡಿಸಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದರು.’
‘ಕೃತ್ಯದಿಂದ ನೊಂದ ಯುವತಿ, ಮದುವೆ ಮಾಡಿಕೊಳ್ಳುವಂತೆ ಒತ್ತಾಯಿಸಿದ್ದರು. ಅದಕ್ಕೆ ಆರೋಪಿ ಒಪ್ಪಿರಲಿಲ್ಲ. ಅವರ ಮನೆಯವರು ಸಹ ಯುವತಿಗೆ ಬೈದಿದ್ದರು. ಅದರಿಂದ ನೊಂದ ಯುವತಿ ಠಾಣೆಗೆ ಬಂದು ದೂರು ನೀಡಿದ್ದರು’ ಎಂದೂ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.