ಬೆಂಗಳೂರು: ‘ರಿಸರ್ವ್ ಬ್ಯಾಂಕ್ ಹೌಸಿಂಗ್ ಕೋ–ಆಪರೇಟಿವ್ ಸೊಸೈಟಿ’ ಹೆಸರಿನಲ್ಲಿ ನಿವೇಶನ ನೀಡುವುದಾಗಿ ಹೇಳಿ ₹ 35 ಲಕ್ಷ ಪಡೆದುಕೊಂಡು ವಂಚಿಸಲಾಗಿದ್ದು, ಈ ಸಂಬಂಧ ಚನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ವಂಚನೆ ಸಂಬಂಧ ವೈದ್ಯೆಯೊಬ್ಬರು ದೂರು ನೀಡಿದ್ದಾರೆ. ವಾಣಿಜ್ಯ ತೆರಿಗೆ ಅಧಿಕಾರಿ ಗೌರಿ ಹಾಗೂ ಜಯಂತಿ ಎಂಬುವರ ವಿರುದ್ಧ ಎಫ್ಐಆರ್ ದಾಖಲಾಗಿದೆ’ ಎಂದು ಪೊಲೀಸರು ಹೇಳಿದರು.
‘ಸ್ನೇಹಿತರೊಬ್ಬರ ಮೂಲಕ ಪರಿಚಯವಾಗಿದ್ದ ಆರೋಪಿಗಳು, ₹ 1.50 ಲಕ್ಷಕ್ಕೆ ದೇವನಹಳ್ಳಿ ಬಳಿ ನಿವೇಶನ ನೀಡುವುದಾಗಿ ಹೇಳಿದ್ದರು. ಅದನ್ನು ನಂಬಿ ವೈದ್ಯೆ ಹಣ ಕೊಟ್ಟಿದ್ದರು. ಪ್ರತಿಯಾಗಿ ಸೊಸೈಟಿ ಹೆಸರಿನ ಪ್ರಮಾಣ ಪತ್ರ ಪಡೆದಿದ್ದರು. ನಂತರ, ಸ್ನೇಹಿತರು ಹಾಗೂ ಸಂಬಂಧಿಕರಿಂದ ಹಣ ಕೊಡಿಸಿ ನಿವೇಶನ ಖರೀದಿಸುವಂತೆ ಮಾಡಿದ್ದರು.’
‘ಇತ್ತೀಚೆಗೆ ಆರೋಪಿಗಳ ಬಗ್ಗೆ ಅನುಮಾನ ಬಂದಿತ್ತು. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕಚೇರಿಗೆ ಹೋಗಿ ವಿಚಾರಿಸಿದ್ದರು. ತಾವು ಯಾವುದೇ ನಿವೇಶನ ಮಾಡಿಲ್ಲವೆಂದು ಅಧಿಕಾರಿಗಳು ಹೇಳಿದ್ದರು’ ಎಂದು ಪೊಲೀಸರು ವಿವರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.