ADVERTISEMENT

ಜುಲೈ 30, 31ಕ್ಕೆ ಸಿಇಟಿ ನಡೆಸಲು ಸಿದ್ಧ: ಡಿಸಿಎಂ

​ಪ್ರಜಾವಾಣಿ ವಾರ್ತೆ
Published 28 ಜುಲೈ 2020, 14:52 IST
Last Updated 28 ಜುಲೈ 2020, 14:52 IST
ಡಿಸಿಎಂ ಸಿ.ಎನ್. ಅಶ್ವತ್ಥನಾರಾಯಣ
ಡಿಸಿಎಂ ಸಿ.ಎನ್. ಅಶ್ವತ್ಥನಾರಾಯಣ   

ಬೆಂಗಳೂರು: ಜುಲೈ 30 ಮತ್ತು 31ರಂದು ಸಿಇಟಿ ನಡೆಸಲು ಸಿದ್ಧವಿರುವುದಾಗಿ ಹೈಕೋರ್ಟ್‌ಗೆ ತಿಳಿಸಲು ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಹೈಕೋರ್ಟ್‌ ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು, ಆರೋಗ್ಯ, ಸಾರಿಗೆ ಮತ್ತು ಪೊಲೀಸ್ ಅಧಿಕಾರಿಗಳ ಜತೆ ತುರ್ತು ವಿಡಿಯೊ ಸಂವಾದ ನಡೆಸಿದ ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥನಾರಾಯಣ, ಪರೀಕ್ಷೆ ನಡೆಸಲು ಎಲ್ಲರೂ ತಯಾರಿ ಆಗಿರುವುದನ್ನು ಖಾತರಿಪಡಿಸಿಕೊಂಡರು.

‘ಬುಧವಾರ ಈ ವಿಷಯನ್ನು ಹೈಕೋರ್ಟ್ ಗಮನಕ್ಕೆ ತರಲಾಗುವುದು. ಅಂತಿಮವಾಗಿ ಹೈಕೋರ್ಟ್ ಸೂಚನೆ ಪ್ರಕಾರ ನಿರ್ಧರಿಸಲಾಗುವುದು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.