ಬೆಂಗಳೂರು: ಸುಬ್ರಹ್ಮಣ್ಯನಗರ ಠಾಣೆ ವ್ಯಾಪ್ತಿಯಲ್ಲಿ ಭುವನಾ (27) ಎಂಬುವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
‘ನಗರದ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಭುವನಾ, ಮೂರು ತಿಂಗಳ ಹಿಂದಷ್ಟೇ ಸಾಗರ್ ಎಂಬುವರನ್ನು ಪ್ರೀತಿಸಿ ಮದುವೆಯಾಗಿದ್ದರು. ಸಾವಿನ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಪತಿ ಸಾಗರ್, ಮದುವೆ ನಂತರ ಯುವತಿಯೊಬ್ಬರ ಜೊತೆ ಓಡಾಡಲಾರಂಭಿಸಿದ್ದರು ಎನ್ನಲಾಗಿದೆ. ಅದು ಗೊತ್ತಾಗುತ್ತಿದ್ದಂತೆ ಭುವನಾ, ಪತಿ ವರ್ತನೆಯನ್ನು ಪ್ರಶ್ನಿಸಿದ್ದರು. ಈ ಸಂಬಂಧ ಜಗಳವೂ ನಡೆದಿತ್ತು. ಅದರಿಂದ ನೊಂದ ಭುವನಾ ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನವಿದೆ’ ಎಂದೂ ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.