ADVERTISEMENT

ಕೋಮು ರಾಜಕಾರಣ ತಿರಸ್ಕರಿಸಿ: ಜ್ಞಾನಪ್ರಕಾಶ ಸ್ವಾಮೀಜಿ

ಸಂವಿಧಾನ ಸಮರ್ಪಣಾ ದಿನ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2022, 19:37 IST
Last Updated 26 ನವೆಂಬರ್ 2022, 19:37 IST
ಪ್ರಜಾಪ್ರಭುತ್ವ ಸಮಾನತಾ ಸಮಾವೇಶದಲ್ಲಿ ಮೈಸೂರಿನ ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ, ಪ್ರಜಾ ಪರಿವರ್ತನಾ ವೇದಿಕೆ ಅಧ್ಯಕ್ಷ ಬಿ.ಗೋಪಾಲ್‌ ಅವರು ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ದಸಂಸ ರಾಜ್ಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್ ಇದ್ದಾರೆ  –ಪ್ರಜಾವಾಣಿ ಚಿತ್ರ
ಪ್ರಜಾಪ್ರಭುತ್ವ ಸಮಾನತಾ ಸಮಾವೇಶದಲ್ಲಿ ಮೈಸೂರಿನ ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ, ಪ್ರಜಾ ಪರಿವರ್ತನಾ ವೇದಿಕೆ ಅಧ್ಯಕ್ಷ ಬಿ.ಗೋಪಾಲ್‌ ಅವರು ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ದಸಂಸ ರಾಜ್ಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್ ಇದ್ದಾರೆ  –ಪ್ರಜಾವಾಣಿ ಚಿತ್ರ   

ಬೆಂಗಳೂರು: ಜಾತಿಗಳನ್ನು ವಿಭಜಿಸಿ, ಕೋಮುಗಳ ಮಧ್ಯೆ ಧ್ವೇಷ ಬಿತ್ತಿ ಅಧಿಕಾರ ಪಡೆಯುವ ರಾಜಕಾರಣ
ವನ್ನು ತಿರಸ್ಕರಿಸುವ ಮೂಲಕ ದಲಿತರು, ಶೂದ್ರರು ಅಂಬೇಡ್ಕರ್‌ ಅವರ ಆಶಯ ಗಳನ್ನು ಪೂರ್ಣಗೊಳಿಸಬೇಕು ಎಂದು ಮೈಸೂರಿನ ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದರು.

ಹೆಣ್ಣೂರು ಶ್ರೀನಿವಾಸ್‌ ನೇತೃತ್ವದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಪ್ರಜಾಪ್ರಭುತ್ವ ಸಮಾನತಾ ಸಮಾವೇಶದಲ್ಲಿ ಅವರು ಮಾತನಾಡಿದರು.

‘ಹಣ, ಆಮಿಷಗಳಿಗೆ ಮತ ಮಾರಿ ಕೊಂಡ ಪರಿಣಾಮಗಳನ್ನು ಅನುಭವಿಸುತ್ತಿದ್ದೇವೆ. ಅಂಬೇಡ್ಕರ್‌ ಅನುಯಾಯಿಗಳಿಂದ ಮತ ಪಡೆದು ಅಧಿಕಾರಕ್ಕೆ ಬಂದವರೇ ಇಂದು ಸಂವಿಧಾನ ಬದಲಿಸುವ ಮಾತುಗಳನ್ನಾಡುತ್ತಿದ್ದಾರೆ ’ ಎಂದರು.

ADVERTISEMENT

ಕೇಂದ್ರ ಸರ್ಕಾರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಹೆಸರಲ್ಲಿ ಮತ್ತೆ ಹಳೆಯ ಪದ್ಧತಿಗೆ ಜಾರುತ್ತಿದೆ. ಸಾವಿರಾರು ವಿದ್ಯಾರ್ಥಿಗಳು ತರಗತಿಗಳಿಂದ ಹೊರಗೆ ಉಳಿಯುತ್ತಿದ್ದಾರೆ. ಪರಿಶಿಷ್ಟರ ಶಿಕ್ಷಣಕ್ಕೆ ಕುತ್ತು ಬಂದಿದೆ ಎಂದರು.

ಪ್ರಜಾ ಪರಿವರ್ತನಾ ವೇದಿಕೆ ಅಧ್ಯಕ್ಷ ಬಿ.ಗೋಪಾಲ್‌, ಭಾರತದಲ್ಲಿ ಜನಿಸಿದ ಎಲ್ಲ ವರ್ಗಗಳಿಗೂ ಮತದಾನದ ಹಕ್ಕು ಸಿಗುವಂತೆ ಮಾಡಿದ್ದು ಅಂಬೇಡ್ಕರ್‌. ಇಂತಹ ಹಕ್ಕಿನ ಸದ್ಬಳಕೆಯಾಗಬೇಕು ಎಂದರು.

ಪ್ರಾಸ್ತಾವಿಕ ಮಾತನಾಡಿದ ದಸಂಸ ರಾಜ್ಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್‌, ‘ವೇದಗಳಲ್ಲೇ ಪ್ರಜಾಪ್ರಭುತ್ವ ಇತ್ತು ಎನ್ನುವ ವಾದ ಒಪ್ಪಲು ಸಾಧ್ಯವಿಲ್ಲ. ಅಂದು ಪ್ರಜಾಪ್ರಭುತ್ವ ಇದ್ದಿದ್ದರೆ ಅಸ್ಪೃಶ್ಯತೆ, ಸಾಮಾಜಿಕ ಬಹಿಷ್ಕಾರದಂತಹ ವರ್ತನೆಗಳು ಏಕೆ ಜೀವಂತವಾಗಿ ಇರುತ್ತಿದ್ದವು’ ಎಂದರು.

ನಿವೃತ್ತ ನ್ಯಾಯಾದೀಶ ಜಿ.ಕೆ.ಗೋಕುಲೆ, ಮುಖಂಡರಾದ ಬಸವ ರಾಜ್‌ ಕೌತಾಳ್‌, ವಿಜಯನರಸಿಂಹ, ಸತ್ಯ ಭದ್ರಾವತಿ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.