ADVERTISEMENT

ಇಂದು ಬೊಂಬೆಗಳ ಅಂಚೆ ಲಕೋಟೆ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2020, 19:24 IST
Last Updated 30 ಸೆಪ್ಟೆಂಬರ್ 2020, 19:24 IST
   

ಬೆಂಗಳೂರು:ಭಾರತೀಯ ಅಂಚೆ ಇಲಾಖೆ ಸಹಯೋಗದಲ್ಲಿ ಪೋಸ್ಟ್‌ ಕ್ರಾಸಿಂಗ್ ಸೊಸೈಟಿ ಆಫ್ ಇಂಡಿಯಾವು ರಾಜ್ಯದ ಚನ್ನಪಟ್ಟಣದ ಬೊಂಬೆ ಸೇರಿದಂತೆ 11 ರಾಜ್ಯಗಳ ಬೊಂಬೆಗಳ ವಿಶೇಷ ಅಂಚೆ ಲಕೋಟೆಯನ್ನು ಗುರುವಾರ ಅನಾವರಣ ಮಾಡಲಿದೆ.

ವಿಶ್ವ ಅಂಚೆ ಲಕೋಟೆ ದಿನ ಹಾಗೂ ಅಂಚೆ ಲಕೋಟೆಯ 151ನೇ ವಾರ್ಷಿಕೋತ್ಸವದ ಪ್ರಯುಕ್ತ ವಿಶೇಷ ಅಂಚೆ ಲಕೋಟೆಗಳನ್ನು ಸಿದ್ಧಪಡಿಸಲಾಗಿದ್ದು, ಏಕಕಾಲದಲ್ಲಿ ವಿವಿಧೆಡೆ ಬಿಡುಗಡೆ ಮಾಡಲಾಗುತ್ತದೆ. ನಗರದ ಜನರಲ್ ಪೋಸ್ಟ್‌ ಆಫೀಸ್‌ನ ಮೇಘದೂತ ಸಭಾಂಗಣದಲ್ಲಿ ಬೆಳಿಗ್ಗೆ 11ಕ್ಕೆ ಅಂಚೆ ಇಲಾಖೆಯಕರ್ನಾಟಕ ವೃತ್ತದ ಚೀಫ್ ಪೋಸ್ಟ್ ಮಾಸ್ಟರ್ ಜನರಲ್ ಶಾರದಾ ಸಂಪತ್ ಅವರು ಅಂಚೆ ಲಕೋಟೆಗಳನ್ನು ಅನಾವರಣ ಮಾಡಲಿದ್ದಾರೆ.

‘ಭಾರತೀಯ ಬೊಂಬೆಗಳು’ ಪರಿಕಲ್ಪನೆಯಲ್ಲಿ ಕರ್ನಾಟಕ, ಆಂಧ್ರ, ತೆಲಂಗಾಣ, ಗುಜರಾತ್, ಹಿಮಾಚಲ ಪ್ರದೇಶ, ಮಧ್ಯ ಪ್ರದೇಶ, ಮಹಾರಾಷ್ಟ್ರ, ಓಡಿಶಾ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ ಹಾಗೂ ತಮಿಳುನಾಡಿನ ಬೊಂಬೆಗಳ ಅಂಚೆ ಲಕೋಟೆ ಬಿಡುಗಡೆ ಮಾಡಲಾಗುತ್ತದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.