ADVERTISEMENT

ಅನಧಿಕೃತ ನಿರ್ಮಾಣಗಳ ತೆರವು: ಬನಶಂಕರಿಯಲ್ಲಿ ₹6 ಕೋಟಿ ಆಸ್ತಿ ವಶ

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2025, 15:52 IST
Last Updated 25 ಏಪ್ರಿಲ್ 2025, 15:52 IST
ಬನಶಂಕರಿ 3ನೇ ಹಂತ ಬಡಾವಣೆಯಲ್ಲಿ ಜೆಸಿಬಿ ಬಳಸಿ ಅಕ್ರಮ ಶೆಡ್‌ಗಳನ್ನು ತೆರವುಗೊಳಿಸಲಾಯಿತು
ಬನಶಂಕರಿ 3ನೇ ಹಂತ ಬಡಾವಣೆಯಲ್ಲಿ ಜೆಸಿಬಿ ಬಳಸಿ ಅಕ್ರಮ ಶೆಡ್‌ಗಳನ್ನು ತೆರವುಗೊಳಿಸಲಾಯಿತು   

ಬೆಂಗಳೂರು: ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಮುಂದುವರೆಸಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು(ಬಿಡಿಎ), ಬನಶಂಕರಿ 3ನೇ ಹಂತ ಬಡಾವಣೆಯಲ್ಲಿ ₹6.15 ಕೋಟಿ ಆಸ್ತಿ ವಶಪಡಿಸಿಕೊಂಡಿದೆ.

ಬೆಂಗಳೂರು ದಕ್ಷಿಣ ತಾಲ್ಲೂಕಿನ ಉತ್ತರಹಳ್ಳಿ ಹೋಬಳಿಯ ಕತ್ರಿಗುಪ್ಪೆ ಗ್ರಾಮದ ಸರ್ವೆ ನಂ. 77/1 ಮತ್ತು 77/2ರ 3079.50 ಚದರ ಅಡಿಯಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ ಶೆಡ್ ಮತ್ತು ಕಾಂಪೌಂಡ್ ಗೋಡೆಯನ್ನು ತೆರವುಗೊಳಿಸಿ, ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಪ್ರದೇಶವನ್ನು ಪ್ರಾಧಿಕಾರವು ವಶಪಡಿಸಿಕೊಂಡಿತು.

ಕಾರ್ಯಾಚರಣೆಯನ್ನು ಬಿಡಿಎ ಕಾರ್ಯನಿರತ ಪಡೆಯ ಆರಕ್ಷಕ ಅಧೀಕ್ಷಕರು, ದಕ್ಷಿಣ ವಿಭಾಗದ ಕಾರ್ಯಪಾಲಕ ಎಂಜಿನಿಯರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಹಾಗೂ ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ನೆರವೇರಿಸಲಾಯಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.