ADVERTISEMENT

ಕುಲಸಚಿವ ಹುದ್ದೆಗೆ ನಾಗರಿಕ ಸೇವಾ ಅಧಿಕಾರಿ–ಮನವಿ

ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡಗೆ ಪತ್ರ

​ಪ್ರಜಾವಾಣಿ ವಾರ್ತೆ
Published 3 ಜುಲೈ 2019, 20:19 IST
Last Updated 3 ಜುಲೈ 2019, 20:19 IST

ಬೆಂಗಳೂರು: ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ನೂತನ ಕುಲಸಚಿವರನ್ನಾಗಿ ಐಎಎಸ್‌, ಐಪಿಎಸ್‌ ಅಥವಾ ಹಿರಿಯ ಕೆಎಎಸ್‌ ಅಧಿಕಾರಿಯನ್ನು ನೇಮಕ ಮಾಡಬೇಕು ಎಂದು ಕೋರಿ ಕುಲಪತಿ ಪ್ರೊ.ಎಸ್‌.ಜಾಫೆಟ್‌ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಇದುವರೆಗೆ ಕುಲಸಚಿವರಾಗಿದ್ದ ಪ್ರೊ.ಎಂ.ರಾಮಚಂದ್ರ ಗೌಡ ಅವರು ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿಯಾಗಿ ನಿಯುಕ್ತರಾಗಿದ್ದಾರೆ. ಅವರ ಸ್ಥಾನಕ್ಕೆ ಐಎಎಸ್‌, ಐಪಿಎಸ್‌ ಅಥವಾ ಹಿರಿಯ ಕೆಎಎಸ್‌ ಅಧಿಕಾರಿಯನ್ನು ನೇಮಿಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರಿಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ. ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯ ಕಾಯ್ದೆ (2000) ಅನ್ನೂ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT