ADVERTISEMENT

ಮಹಿಳಾ ಮೀಸಲಾತಿ ಮಸೂದೆಗೆ ಬಿಜೆಪಿ ವಿರೋಧ: ಸುರೇಶ್‌ ಟೀಕೆ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2022, 2:33 IST
Last Updated 27 ಮಾರ್ಚ್ 2022, 2:33 IST
ಕೋವಿಡ್‌ ಸೇನಾನಿಗಳನ್ನು ಸಂಸದ ಡಿ.ಕೆ.ಸುರೇಶ್‌ ಸನ್ಮಾನಿಸಿದರು. ಆರ್‌.ಕೆ.ರಮೇಶ್‌, ಪುಷ್ಪಾ ಅಮರನಾಥ್, ಕುಸುಮಾ ಹನುಮಂತರಾಯಪ್ಪ, ಬೆಂಗಳೂರು ದಕ್ಷಿಣ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಜಯಶ್ರೀಗೌಡ, ಜಯಶ್ರೀ ಅಚ್ಯುತ್‌, ಶೋಭಾಗೌಡ, ಪಾರಿಜಾತ ದೊರೆಸ್ವಾಮಿ, ಹೆನ್ನಾಗರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮುನಿರತ್ನಮ್ಮ ಮುನಿರಾಜು, ಸುಷ್ಮಾ ರಾಜಗೋಪಾಲರೆಡ್ಡಿ ಹಾಗೂ ಚಂಪಕ ಚಂದ್ರು ಇದ್ದಾರೆ
ಕೋವಿಡ್‌ ಸೇನಾನಿಗಳನ್ನು ಸಂಸದ ಡಿ.ಕೆ.ಸುರೇಶ್‌ ಸನ್ಮಾನಿಸಿದರು. ಆರ್‌.ಕೆ.ರಮೇಶ್‌, ಪುಷ್ಪಾ ಅಮರನಾಥ್, ಕುಸುಮಾ ಹನುಮಂತರಾಯಪ್ಪ, ಬೆಂಗಳೂರು ದಕ್ಷಿಣ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಜಯಶ್ರೀಗೌಡ, ಜಯಶ್ರೀ ಅಚ್ಯುತ್‌, ಶೋಭಾಗೌಡ, ಪಾರಿಜಾತ ದೊರೆಸ್ವಾಮಿ, ಹೆನ್ನಾಗರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮುನಿರತ್ನಮ್ಮ ಮುನಿರಾಜು, ಸುಷ್ಮಾ ರಾಜಗೋಪಾಲರೆಡ್ಡಿ ಹಾಗೂ ಚಂಪಕ ಚಂದ್ರು ಇದ್ದಾರೆ   

ಬೆಂಗಳೂರು: ‘ಸಾರ್ವತ್ರಿಕ ಚುನಾವಣೆಯಲ್ಲಿಮಹಿಳೆಯರಿಗೆ ಶೇ 33 ಮೀಸಲಾತಿ ಕಲ್ಪಿಸುವ ಮಸೂದೆಗೆ ಲೋಕಸಭೆಯಲ್ಲಿ ಅನುಮೋದನೆ ಲಭಿಸಿತ್ತು. ಆದರೆ, ರಾಜ್ಯಸಭೆಯಲ್ಲಿ ಈ ಮಸೂದೆಯನ್ನು ಬಿಜೆಪಿ ಸದಸ್ಯರೇ ವಿರೋಧಿಸಿದ್ದರು’ ಎಂದು ಸಂಸದ ಡಿ.ಕೆ.ಸುರೇಶ್‌ ದೂರಿದರು.

ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಮಹಿಳಾ ಘಟಕ ಹಮ್ಮಿಕೊಂಡಿದ್ದಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಕಾಂಗ್ರೆಸ್‌ ಮುಖಂಡ ಆರ್‌.ಕೆ.ರಮೇಶ್‌, ‘ಜನಪರ ಕಾರ್ಯಗಳಲ್ಲಿ ತೊಡಗಿಕೊಳ್ಳುವ ಕಾಂಗ್ರೆಸ್‌ ಕಾರ್ಯಕರ್ತರಿಗೆ ಪೊಲೀಸರ ಮೂಲಕ ಬೆದರಿಸುವ ಕೆಲಸವನ್ನುಶಾಸಕ ಎಂ.ಕೃಷ್ಣಪ್ಪ ಮಾಡುತ್ತಿದ್ದಾರೆ. ಆಪ್ತರು ಹಾಗೂ ಬೆಂಬಲಿಗರ ಒಡೆತನದ ಲೇಔಟ್‌ಗಳಲ್ಲಷ್ಟೇ ಡಾಂಬರೀಕರಣ ಮಾಡುವಂತೆ ಸೂಚಿಸಿದ್ದಾರೆ. ಬಡವರು ವಾಸಿಸುವ ಬಡಾವಣೆಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಹಿಂದೇಟು ಹಾಕುತ್ತಿದ್ದಾರೆ’ ಎಂದು ಕಿಡಿಕಾರಿದರು.

ADVERTISEMENT

ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್, ಕಾಂಗ್ರೆಸ್‌ ಮುಖಂಡರಾದ ಕುಸುಮಾ ಹನುಮಂತರಾಯಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.