ಬೆಂಗಳೂರು: ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ 2 ಎ ಸೇರ್ಪಡೆ ಮಾಡುವ ಕುರಿತು ಬಸವ ಜಯ ಮೃತ್ಯುಂಜಯ ಸಾಮೀಜಿ ಮತ್ತು ವಚನಾನಂದ ಸ್ವಾಮೀಜಿಯವರಿಗೆ ದಾಖಲೆಗಳನ್ನು ನೀಡುವಂತೆ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಪತ್ರ ಬರೆದಿದೆ.
ಈ ಕ್ರಮವನ್ನು ಸಚಿವರಾದ ಮುರುಗೇಶ್ ನಿರಾಣಿ, ಸಿ.ಸಿ.ಪಾಟೀಲ ಅವರು ಸ್ವಾಗತಿಸಿದ್ದಾರೆ. 2ಎಗೆ ಸೇರಿಸುವ ಸಂಬಂಧ ಸಾಕ್ಷಾಧ್ಯಾರಗಳಿದ್ದರೆ ಖುದ್ದಾಗಿ ಅಥವಾ ಸಂಬಂಧಪಟ್ಟವರ ಮೂಲಕ ಮಾರ್ಚ್ 22 ರಂದು ಆಯೋಗಕ್ಕೆ ನೀಡುವಂತೆ ಸೂಚಿಸಿರುವುದು ಸಕಾರಾತ್ಮಕ ಬೆಳವಣಿಗೆ ಎಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.