ADVERTISEMENT

ಹೆಗ್ಗನಹಳ್ಳಿಯಲ್ಲಿ ಗಲಾಟೆ: ಚಾಕುವಿನಿಂದ ಇರಿತಕ್ಕೆ ಒಳಗಾದ ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2022, 17:56 IST
Last Updated 17 ಆಗಸ್ಟ್ 2022, 17:56 IST
   

ಬೆಂಗಳೂರು: ಹೆಗ್ಗನಹಳ್ಳಿಯಲ್ಲಿ ಬುಧವಾರ ರಾತ್ರಿ ನಡೆದ ಗಲಾಟೆಯಲ್ಲಿ ಚಾಕುವಿನಿಂದ ಇರಿತಕ್ಕೆ ಒಳಗಾದ ಅಜಿಮುಲ್ಲಾ ಖಾನ್ (43) ಎಂಬುವರು ಮೃತಪಟ್ಟಿದ್ದಾರೆ.

ಅಜಿಮುಲ್ಲಾ ಖಾನ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಮೃತಪಟ್ಟಿದ್ದಾರೆ. ಪಕ್ಕದ ಮನೆಯವರೊಂದಿಗೆ ಗಲಾಟೆ ನಡೆದಿದ್ದು ಆರೋಪಿ ಚಾಕುವಿ‌ನಿಂದ ಇರಿದು ಪರಾರಿಯಾಗಿದ್ದಾನೆ‌.

ಘಟನೆಗೆಕಾರಣ ತಿಳಿದುಬಂದಿಲ್ಲ. ಆರೋಪಿಯ ಹಿನ್ನೆಲೆಯ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಉತ್ತರ ವಿಭಾಗದ ಡಿಸಿಪಿ ವಿನಾಯಕ ಪಾಟೀಲ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.