ADVERTISEMENT

ಬೆಂಗಳೂರು | ಸಿಟಿಮಾರ್ಕೆಟ್ ಠಾಣೆಗೆ ನುಗ್ಗಿ ದುಷ್ಕರ್ಮಿಗಳ ಗಲಾಟೆ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2019, 7:24 IST
Last Updated 20 ಅಕ್ಟೋಬರ್ 2019, 7:24 IST
   

ಬೆಂಗಳೂರು: ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ಅನುಮಾನಾಸ್ಪದ ವ್ಯಕ್ತಿಗಳನ್ನು ಬಂಧಿಸಿದರು ಎಂಬ ಕಾರಣಕ್ಕೆ 100ಕ್ಕೂ ಹೆಚ್ಚು ಜನರಗುಂಪು ನಗರದ ಸಿಟಿ ಮಾರ್ಕೆಟ್ ಠಾಣೆಗೆ ನುಗ್ಗಿ ಗಲಾಟೆ ಮಾಡಿದೆ.

ಠಾಣೆಯಲ್ಲಿದ್ದ ಸಿಬ್ಬಂದಿ‌ಯನ್ನು ನಿಂದಿಸಿರುವ ಗುಂಪು, ಮುಂದೆ ನಿಲ್ಲಿಸಿದ್ದ ಇರುವ ಪೊಲೀಸ್ ವಾಹನಗಳಿಗೆ ಕಲ್ಲು ಎಸೆದಿದೆ.ಠಾಣೆಯಲ್ಲಿದ್ದ ಆರೋಪಿಗಳನ್ನೂ ಕರೆದೊಯ್ದಿದ್ದಾರೆ ಎಂದು ಮೂಲಗಳು ಹೇಳಿವೆ.

ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಠಾಣೆಯಲ್ಲಿ ಸಿಬ್ಬಂದಿ ಸಂಖ್ಯೆ ಕಡಿಮೆ‌ ಇತ್ತು. ಜಖಂಗೊಂಡ ವಾಹನಗಳನ್ನು ಪೊಲೀಸರು, ಬೇರೆಡೆ ಸ್ಥಳಾಂತರಿಸುತ್ತಿದ್ದಾರೆ. ಘಟನೆ ಬಗ್ಗೆ ಮಾಹಿತಿ ನೀಡಲು ಹಿರಿಯ ಅಧಿಕಾರಿಗಳು ನಿರಾಕರಿಸುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.