ADVERTISEMENT

ರಸ್ತೆ ವಿಭಜಕಕ್ಕೆ ಗುದ್ದಿದ್ದ ಕಾರು: ಇಬ್ಬರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2021, 16:50 IST
Last Updated 22 ಅಕ್ಟೋಬರ್ 2021, 16:50 IST

ಬೆಂಗಳೂರು: ಹೊಸೂರು ರಸ್ತೆಯ ಸೇಂಟ್‌ ಜಾನ್ಸ್ ಆಸ್ಪತ್ರೆ ವೃತ್ತದಲ್ಲಿ ರಸ್ತೆ ವಿಭಜಕಕ್ಕೆ ಕಾರು ಗುದ್ದಿ ಉರುಳಿಬಿದ್ದಿದ್ದು, ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ.

‘ಗುರುವಾರ ತಡರಾತ್ರಿ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಎರಡು ಏರ್‌ಬ್ಯಾಗ್‌ಗಳು ತೆರೆದುಕೊಂಡಿದ್ದರಿಂದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಮಡಿವಾಳ ಸಂಚಾರ ಠಾಣೆ ಪೊಲೀಸರು ಹೇಳಿದರು.

‘ಸ್ನೇಹಿತರಿಬ್ಬರು, ಮಾರುತಿ ಸುಜುಕಿ ‘ಬಲೆನೊ’ ಕಾರಿನಲ್ಲಿ ಹೊರಟಿದ್ದರು. ಮದ್ಯದ ಅಮಲಿನಲ್ಲಿದ್ದ ಚಾಲಕ, ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿದ್ದ. ರಸ್ತೆ ವಿಭಜಕಕ್ಕೆ ಕಾರು ಗುದ್ದಿಸಿದ್ದ. ಇದರಿಂದ ರಸ್ತೆಯಲ್ಲೇ ಕಾರು ಉರುಳಿ ಬಿದ್ದಿತ್ತು’ ಎಂದೂ ತಿಳಿಸಿದರು.

ADVERTISEMENT

‘ಪ್ರಕರಣ ದಾಖಲಿಸಿಕೊಂಡು ಕಾರು ಜಪ್ತಿ ಮಾಡಲಾಗಿದೆ. ಚಾಲಕನನ್ನು ವಿಚಾರಣೆ ನಡೆಸಬೇಕಿದೆ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.