ADVERTISEMENT

ಬಸ್‌ ಡಿಕ್ಕಿ: ಯುವಕ ಸ್ಥಳದಲ್ಲೇ ಸಾವು

​ಪ್ರಜಾವಾಣಿ ವಾರ್ತೆ
Published 24 ಜುಲೈ 2019, 19:06 IST
Last Updated 24 ಜುಲೈ 2019, 19:06 IST

ಬೆಂಗಳೂರು: ಖಾಸಗಿ ಬಸ್ ಡಿಕ್ಕಿಯಾಗಿ ಜಾರ್ಖಂಡ್‌ನ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮೆಜೆಸ್ಟಿಕ್‌ ಸಮೀಪ ‌ಮಂಗಳವಾರ ರಾತ್ರಿ ನಡೆದಿದೆ.

ಪ್ರಭಾನಂದ ಕಾರುವಾಲಿ (30) ಮೃತವ್ಯಕ್ತಿ. ಕೆಲಸ ಅರಸಿ ನಗರಕ್ಕೆ ಬಂದಿದ್ದ ಕಾರುವಾಲಿ, ಸ್ನೇಹಿತನ ಮನೆಯಲ್ಲಿ ವಾಸವಾಗಿದ್ದ.

ಕೆಲಸದ ನಿಮಿತ್ತ ಮೆಜೆಸ್ಟಿಕ್ ಸಮೀಪದ ಎಲೈಟ್ ಜಂಕ್ಷನ್ ಬಳಿ ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆಬಂದಿದ್ದ ಕಾರುವಾಲಿ, ರಸ್ತೆ ದಾಟುತ್ತಿದ್ದ ವೇಳೆ ಅತಿವೇಗದಿಂದ ಬಂದ ಬಸ್ ಡಿಕ್ಕಿಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದಕಾರುವಾಲಿ ಮೇಲೆ ಬಸ್ ಹರಿದ ಪರಿಣಾಮ ಸ್ಥಳದಲ್ಲೇ ಸಾವು ಸಂಭವಿಸಿದೆ.

ADVERTISEMENT

ಘಟನೆ ಸಂಬಂಧ ಬಸ್ ಚಾಲಕ ಮಹದೇವ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು. ಉಪ್ಪಾರಪೇಟೆ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.