ಸಾವು
(ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಹಳೆ ಮದ್ರಾಸ್ ರಸ್ತೆಯ ಬೆನ್ನಿಗಾನಹಳ್ಳಿಯ ರೈಲ್ವೆ ಸೇತುವೆ ಬಳಿ ಖಾಸಗಿ ಬಸ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಎ.ನಾರಾಯಣಪುರದ ನಿವಾಸಿ ಮೇನಕಾ (61) ಮೃತಪಟ್ಟವರು.
‘ಶುಕ್ರವಾರ ಬೆಳಿಗ್ಗೆ 6 ಗಂಟೆಯ ಸುಮಾರಿಗೆ ಎ.ನಾರಾಯಣಪುರದಿಂದ ಇಂದಿರಾನಗರಕ್ಕೆ ಪತಿ ಮಹದೇವಯ್ಯ ಅವರ ಜೊತೆಗೆ ಸ್ಕೂಟರ್ನಲ್ಲಿ ತೆರಳುತ್ತಿದ್ದರು. ಹಳೆ ಮದ್ರಾಸ್ ರಸ್ತೆಯ ಬೆನ್ನಿಗಾನಹಳ್ಳಿ ರೈಲ್ವೆ ಸೇತುವೆಯ ಬಳಿ ವೇಗವಾಗಿ ಬಂದ ಖಾಸಗಿ ಬಸ್ವೊಂದು ಸ್ಕೂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಕೆಳಕ್ಕೆ ಬಿದ್ದಿದ್ದರು. ಮೇನಕಾ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು. ಮಹದೇವಯ್ಯ ಅವರಿಗೆ ಸಣ್ಣಪುಟ್ಟ ಗಾಯವಾಗಿದೆ’ ಎಂದು ಪೊಲೀಸರು ಹೇಳಿದರು.
ಮಹದೇವಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.