ADVERTISEMENT

ಕಾರು, ಬೈಕ್‌ ಮೇಲೆ ಉರುಳಿದ ಟಿಪ್ಪರ್‌: ಮೂವರು ಸಾವು

​ಪ್ರಜಾವಾಣಿ ವಾರ್ತೆ
Published 10 ಜನವರಿ 2022, 14:47 IST
Last Updated 10 ಜನವರಿ 2022, 14:47 IST
   

ಬೆಂಗಳೂರು: ಜಲ್ಲಿ ಕಲ್ಲು ತುಂಬಿದ್ದ ಟಿಪ್ಪರ್‌ವೊಂದು ಎರಡು ಕಾರು ಹಾಗೂ ಬೈಕೊಂದರ ಮೇಲೆ ಉರುಳಿಬಿದ್ದಿದ್ದು, ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ.

ಕುಂಬಳಗೋಡು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಟಿಪ್ಪರ್‌ ಉರುಳಿದ್ದರಿಂದ ಜಲ್ಲಿಕಲ್ಲುಗಳೆಲ್ಲಾ ರಸ್ತೆಗೆ ಚೆಲ್ಲಿದ್ದವು. ಜಲ್ಲಿಕಲ್ಲಿನ ರಾಶಿಯ ಅಡಿಯಲ್ಲಿ ಕಾರುಗಳು ಹಾಗೂ ಬೈಕ್ ಸಿಲುಕಿದ್ದವು. ಜೆಸಿಬಿ ಮೂಲಕ ಜಲ್ಲಿಕಲ್ಲು ತೆರವು ಮಾಡಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.‌

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.