ADVERTISEMENT

ಬೆಂಗಳೂರಿನಲ್ಲಿ ಪ್ರತ್ಯೇಕ ಅಪಘಾತ; ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2021, 20:11 IST
Last Updated 11 ಮಾರ್ಚ್ 2021, 20:11 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ನಗರದ ಎರಡು ಕಡೆ ಅಪಘಾತ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ಜಗದೀಶ್ ಆಚಾರಿ (30) ಹಾಗೂ ವೆಂಕಟರಮಣಪ್ಪ (58) ಮೃತರು. ಎರಡೂ ಅಪಘಾತಗಳ ಬಗ್ಗೆ ಹಲಸೂರು ಸಂಚಾರ ಠಾಣೆ ಹಾಗೂ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

’ಸವಾರ ಜಗದೀಶ್ ಆಚಾರಿ, ಗುರುವಾರ ನಸುಕಿನಲ್ಲಿ ಕೋರಮಂಗಲದ ಕಡೆಯಿಂದ ಇಂದಿರಾನಗರದ ಕಡೆಗೆ ಬರುತ್ತಿದ್ದರು. ಮಾರ್ಗಮಧ್ಯೆ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕಕ್ಕೆ ಬೈಕ್‌ ಗುದ್ದಿಸಿದ್ದರು. ರಸ್ತೆಯಲ್ಲಿ ಬೈಕ್ ಉರುಳಿಬಿದ್ದಿತ್ತು. ತೀವ್ರ ಗಾಯಗೊಂಡಿದ್ದ ಜಗದೀಶ್, ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ಹೇಳಿದರು.

ADVERTISEMENT

ಲಾರಿ ಗುದ್ದಿ ಪಾದಚಾರಿ ಸಾವು: ಇನ್ನೊಂದು ಪ್ರಕರಣದಲ್ಲಿ ಲಾರಿ ಗುದ್ದಿ ವೆಂಕಟರಮಣಪ್ಪ ಮೃತಪಟ್ಟಿದ್ದಾರೆ.

‘ಬುಧವಾರ ಸಂಜೆ ನಾಡಗೌಡ ಗೊಲ್ಲಹಳ್ಳಿ ಕಡೆಯಿಂದ ಕಣ್ಣೂರು ಕಡೆಗಿನ ರಸ್ತೆಯಲ್ಲಿ ನಡೆದುಕೊಂಡು ಹೊರಟಿದ್ದರು. ಅದೇ ಸಂದರ್ಭದಲ್ಲಿ ಅತೀ ವೇಗವಾಗಿ ಬಂದ ಲಾರಿಯೊಂದು ಅವರಿಗೆ ಗುದ್ದಿತ್ತು.’

‘ತೀವ್ರ ಗಾಯಗೊಂಡಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೇ ಅವರು ತೀರಿಕೊಂಡಿದ್ದಾರೆ’ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.