ADVERTISEMENT

ರಸ್ತೆ ಗುಂಡಿ: ದುರಸ್ತಿ ಗಡುವು ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2022, 16:29 IST
Last Updated 15 ನವೆಂಬರ್ 2022, 16:29 IST

ಬೆಂಗಳೂರು: ನಗರದಲ್ಲಿ 33 ಸಾವಿರ ರಸ್ತೆ ಗುಂಡಿಗಳಿದ್ದು, ಒಂದು ಸಾವಿರ ಗುಂಡಿಗಳನ್ನು ಮಾತ್ರ ಮುಚ್ಚಬೇಕಿದೆ. ನ.20ರೊಳಗೆ ಎಲ್ಲವನ್ನೂ ಮುಚ್ಚಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ತಿಳಿಸಿದರು.

ರಸ್ತೆಗಳ ಗುಂಡಿ ಮುಚ್ಚಲು ಈ ಹಿಂದೆ ನ.10ರ ಗಡುವು ನೀಡಲಾಗಿತ್ತು. ಆದರೆ ಒಂದೆರಡು ದಿನ ಮಳೆ ಹಾಗೂ ಪ್ರತಿಕೂಲ ಹವಾಮಾನ ಇದ್ದುದ್ದರಿಂದ ದುರಸ್ತಿ ಕಾಮಗಾರಿ ನಡೆದಿಲ್ಲ. ಇನ್ನೆರಡು ದಿನ ಮಳೆ ಬರುವ ಮುನ್ಸೂಚನೆ ಇದೆ. ಹೀಗಾಗಿ ಗುಂಡಿ ಮುಚ್ಚುವ ಗಡುವನ್ನು ವಿಸ್ತರಿಸಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT