ಬೆಂಗಳೂರು: ಕುಮಾರಸ್ವಾಮಿ ಲೇಔಟ್ ಠಾಣೆ ವ್ಯಾಪ್ತಿಯ ಮನೆಯೊಂದಕ್ಕೆ ನುಗ್ಗಿ ಸುಲಿಗೆ ಮಾಡಿದ್ದ ಆರೋಪದಡಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.
‘ಕೋಣನಕುಂಟೆ ನಿವಾಸಿ ವೆಂಕಟೇಶ್ (20), ಹಿರಿಯೂರಿನ ಸುನೀಲ್ (21), ದೊಡ್ಡಕಲ್ಲಸಂದ್ರದ ಮಂಜ (26), ಶಿವರಾಜ್ (28) ಹಾಗೂ ಜಗದೀಶ್ ರೆಡ್ಡಿ (20) ಬಂಧಿತರು. ಅವರಿಂದ 9 ಗ್ರಾಂ ಚಿನ್ನಾಭರಣ, ಮೊಬೈಲ್, ಕೃತ್ಯಕ್ಕೆ ಬಳಸಿದ್ದ ಚಾಕು, ಆಟೊ ಹಾಗೂ ಬೈಕ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.
‘ಮಹಿಳೆಯೊಬ್ಬರೇ ಮನೆಯಲ್ಲಿದ್ದರು. ಅದನ್ನು ತಿಳಿದುಕೊಂಡು ಮನೆಗೆ ನ. 26ರಂದು ಸಂಜೆ ನುಗ್ಗಿದ್ದ ಆರೋಪಿಗಳು, ಚಾಕು ತೋರಿಸಿ ಬೆದರಿಸಿದ್ದರು. ಮನೆಯಲ್ಲೆಲ್ಲ ಹುಡುಕಾಡಿದ್ದರು. ಯಾವುದೇ ಚಿನ್ನಾಭರಣ ಸಿಕ್ಕಿರಲಿಲ್ಲ. ಮಹಿಳೆ ಧರಿಸಿದ್ದ ಚಿನ್ನದ ಸರ ಹಾಗೂ ಮೊಬೈಲ್ ಕಸಿದುಕೊಂಡು ಆರೋಪಿಗಳು ಪರಾರಿಯಾಗಿದ್ದರು’ ಎಂದೂ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.