ADVERTISEMENT

ದರೋಡೆಗೆ ಸಂಚು: ರೌಡಿ ಹಂದಿ ಬಂಧನ

​ಪ್ರಜಾವಾಣಿ ವಾರ್ತೆ
Published 12 ಮೇ 2022, 18:03 IST
Last Updated 12 ಮೇ 2022, 18:03 IST

ಬೆಂಗಳೂರು: ಲಗ್ಗೆರೆ ಮೇಲ್ಸೇತುವೆ ಬಳಿ ಸಾರ್ವಜನಿಕರನ್ನು ಅಡ್ಡಗಟ್ಟಿ ಸುಲಿಗೆ ಮಾಡಲು ಸಂಚು ರೂಪಿಸಿದ್ದ ರೌಡಿ ಚೇತನ್ ಅಲಿಯಾಸ್ ಹಂದಿ ಹಾಗೂ ಆತನ 6 ಸಹಚರರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿ ಚೇತನ್‌, ಸಹಚರರ ಜೊತೆ ಸೇರಿ ಅಪರಾಧ ಕೃತ್ಯ ಎಸಗುತ್ತಿದ್ದ. ಆತನ ದರೋಡೆ ಸಂಚಿನ ಬಗ್ಗೆ ಮೇ 9ರಂದು ಮಾಹಿತಿ ಸಿಕ್ಕಿತ್ತು. ಕಾರ್ಯಾಚರಣೆ ನಡೆಸಿ ಕಾರು ಹಾಗೂ ಮಾರಕಾಸ್ತ್ರಗಳ ಸಮೇತ ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಬಂಧಿತರ ವಿರುದ್ಧ ಮಹಾಲಕ್ಷ್ಮಿಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ’ ಎಂದೂ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.