ಬೆಂಗಳೂರು: ತಲಘಟ್ಟಪುರ ಠಾಣೆ ವ್ಯಾಪ್ತಿಯಲ್ಲಿ ರೌಡಿ ಗಾಳಪ್ಪ ಅಲಿಯಾಸ್ ಹುಚ್ಚಗಾಳ ಎಂಬಾತನನ್ನು ಲಾಂಗ್ನಿಂದ ಹೊಡೆದು ಕೊಲೆ ಮಾಡಲಾಗಿದ್ದು, ಹಳೇ ವೈಷಮ್ಯದಿಂದ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ.
‘ರೌಡಿ ಗಾಳಪ್ಪ ಕೆಲಸ ನಿಮಿತ್ತ ಚಿಕ್ಕೆಗೌಡನಪಾಳ್ಯಕ್ಕೆ ಬಂದಿದ್ದ. ಇದೇ ಸಂದರ್ಭದಲ್ಲಿ ದಾಳಿ ಮಾಡಿದ್ದ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ’ ಎಂದು ಪೊಲೀಸರು ಹೇಳಿದರು.
‘ಎರಡು ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಗಾಳಪ್ಪ ವಿರುದ್ಧ ಕೆಂಗೇರಿ ಹಾಗೂ ತಾವರೆಕೆರೆ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದ್ದವು’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.