ADVERTISEMENT

ರೌಡಿ ಹತ್ಯೆ: ಇಬ್ಬರು ವಶಕ್ಕೆ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2023, 17:05 IST
Last Updated 6 ಆಗಸ್ಟ್ 2023, 17:05 IST
ಉತ್ತರ ಪ್ರದೇಶದಲ್ಲಿ ಇಬ್ಬರು ಪುರೋಹಿತರನ್ನು ಹತ್ಯೆ ಮಾಡಲಾಗಿತ್ತು.
ಉತ್ತರ ಪ್ರದೇಶದಲ್ಲಿ ಇಬ್ಬರು ಪುರೋಹಿತರನ್ನು ಹತ್ಯೆ ಮಾಡಲಾಗಿತ್ತು.   

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿ ಮನೆಯತ್ತ ಹೊರಟಿದ್ದ ರೌಡಿ ಮಹೇಶ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದ ಪ್ರಕರಣದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

‘ಸಿದ್ದಾಪುರ ಠಾಣೆಯ ರೌಡಿ ಪಟ್ಟಿಯಲ್ಲಿ ಹೆಸರಿದ್ದ ಮಹೇಶ್‌ನನ್ನು ಹಳೇ ವೈಷಮ್ಯದಿಂದಾಗಿ ಕೊಲೆ ಮಾಡಿರುವುದು ಗೊತ್ತಾಗಿದೆ. ಕೃತ್ಯ ಎಸಗಿದ್ದಾರೆ ಎನ್ನಲಾದ ರೌಡಿ ವಿಲ್ಸನ್ ಗಾರ್ಡನ್ ನಾಗ, ಈತನ ಸಹಚರ ಮೋಹನ್‌ ಅಲಿಯಾಸ್ ಡಬಲ್ ಮೀಟರ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಕೊಲೆ ಪ್ರಕರಣದಲ್ಲಿ ಮಹೇಶ್ ಜೈಲಿಗೆ ಹೋಗಿದ್ದ. ಜೈಲಿನಿಂದ ಹೊರಬಂದ ನಂತರ, ನಾಗ ಹಾಗೂ ಆತನ ಕಡೆಯವರನ್ನು ಹತ್ಯೆಗೆ  ಸಂಚು ರೂಪಿಸುತ್ತಿದ್ದ. ಈ ಮಾಹಿತಿ ತಿಳಿದ ನಾಗ, ಜೈಲಿನಿಂದ ಹೊರಬರುತ್ತಿದ್ದಂತೆ ಮಹೇಶ್‌ ಹತ್ಯೆ ಮಾಡಿದ್ದಾನೆ’ ಎಂದು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.