ADVERTISEMENT

ನಡುರಸ್ತೆಯಲ್ಲಿ ರೌಡಿ ಶ್ರೀನಿವಾಸ್ ಹತ್ಯೆ

​ಪ್ರಜಾವಾಣಿ ವಾರ್ತೆ
Published 9 ಜನವರಿ 2021, 19:50 IST
Last Updated 9 ಜನವರಿ 2021, 19:50 IST

ಬೆಂಗಳೂರು: ರಾಜಗೋಪಾಲನಗರ ಠಾಣೆ ವ್ಯಾಪ್ತಿಯಲ್ಲಿ ರೌಡಿ ಶ್ರೀನಿವಾಸ್ ಅಲಿಯಾಸ್ ಕರಿ ಸೀನ (36) ಎಂಬಾತನನ್ನು ಮಾರಕಾಸ್ತ್ರಗಳಿಂದ ಹೊಡೆದು ಶನಿವಾರ ಕೊಲೆ ಮಾಡಲಾಗಿದೆ.

‘ಸ್ಥಳೀಯ ನಿವಾಸಿಯಾಗಿದ್ದ ಸೀನ, ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಜೈಲಿಗೂ ಹೋಗಿ ಬಂದಿದ್ದ. ಹಳೆ ವೈಷಮ್ಯದಿಂದಾಗಿ ಎದುರಾಳಿ ಗ್ಯಾಂಗ್‌ನವರು ಆತನನ್ನು ಕೊಲೆ ಮಾಡಿರುವ ಅನುಮಾನವಿದೆ’ ಎಂದು ಪೊಲೀಸರು ಹೇಳಿದರು.

‘ಲಗ್ಗೆರೆ ಕಸ್ತೂರಿನಗರದ ಬಸಪ್ಪ ಕಟ್ಟೆ ಬಳಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಸೀನ ಹೊರಟಿದ್ದ. ಅಡ್ಡಗಟ್ಟಿ ದಾಳಿ ಮಾಡಿದ್ದ ದುಷ್ಕರ್ಮಿಗಳ ತಂಡ, ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿದೆ. ರಕ್ತದ ಮಡುವಿನಲ್ಲಿದ್ದ ಶ್ರೀನಿವಾಸ್‌ನನ್ನು ಸ್ಥಳೀಯರು ಕೆ.ಸಿ.ಜನರಲ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಸ್ಥಳದಲ್ಲೇ ಆತ ಮೃತಪಟ್ಟಿರುವಾಗಿ ವೈದ್ಯರು ಹೇಳಿದರು’ ಎಂದು ಪೊಲೀಸರು ತಿಳಿಸಿದರು.

ADVERTISEMENT

‘ಮಚ್ಚು ಹಾಗೂ ಲಾಂಗ್‌ನಿಂದ ಹೊಡೆದು, ದೇಹದ ಹಲವು ಭಾಗಗಳಿಗೆ ಚಾಕುವಿನಿಂದ ಇರಿದು ಬಳಿಕ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಆರೋಪಿಗಳು ಪರಾರಿಯಾಗಿದ್ದಾರೆ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.