ಬೆಂಗಳೂರು: ಸ್ಥಳ ಮಹಜರಿಗೆ ಕರೆದುಕೊಂಡು ಹೋಗಿದ್ದ ವೇಳೆ ಹೆಣ್ಣೂರು ಪೊಲೀಸ್ ಠಾಣೆಯ ಪಿಎಸ್ಐ ನಿಂಗರಾಜ್ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಲು ಮುಂದಾಗಿದ್ದ ರೌಡಿ ರಘು (30) ಮೇಲೆ ಪೊಲೀಸರು ಮಂಗಳವಾರ ಗುಂಡಿನ ದಾಳಿ ನಡೆಸಿದ್ದಾರೆ.
'ಇತ್ತೀಚೆಗೆ ನಾಗವಾರ ವರ್ತುಲ ರಸ್ತೆಯ ಸರ್ವಿಸ್ ರಸ್ತೆ ಬಳಿ ಗಾರ್ಮೆಂಟ್ಸ್ ಉದ್ಯಮಿ ಶ್ರೀಧರ್ ಹತ್ಯೆ ನಡೆದಿತ್ತು. ಪ್ರಕರಣದ ಪ್ರಮುಖ ಆರೋಪಿ ರಘುನನ್ನು ಸ್ಥಳಕ್ಕೆ ಕರೆದುಕೊಂಡು ಹೋಗಲಾಗಿತ್ತು. ಈ ವೇಳೆ ಘಟನಾ ಸ್ಥಳದಲ್ಲಿ ಅವಿತಿಟ್ಟಿದ್ದ ಮಚ್ಚಿನಿಂದ ಪಿಎಸ್ಐ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ. ಹೀಗಾಗಿ ಇನ್ಸ್ಪೆಕ್ಟರ್ ವಸಂತ್ ಅವರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದರು. ಆರೋಪಿಯ ಬಲಗಾಲಿಗೆ ಗುಂಡು ತಾಕಿತ್ತು' ಎಂದು ಪೊಲೀಸರು ತಿಳಿಸಿದ್ದಾರೆ.
'ಪಿಎಸ್ಐ ನಿಂಗರಾಜ್ ಮತ್ತು ಆರೋಪಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ' ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.