ADVERTISEMENT

ಗೋವಿಂದಪುರದಲ್ಲಿ ರೌಡಿ ಕೊಲೆ

​ಪ್ರಜಾವಾಣಿ ವಾರ್ತೆ
Published 22 ಜೂನ್ 2021, 18:37 IST
Last Updated 22 ಜೂನ್ 2021, 18:37 IST

ಬೆಂಗಳೂರು: ಗೋವಿಂದಪುರ ಠಾಣೆ ವ್ಯಾಪ್ತಿಯಲ್ಲಿ ರೌಡಿ ಸೈಯದ್ ಕರೀಂ ಅಲಿ ಎಂಬಾತನನ್ನು ಚಾಕುವಿನಿಂದ ಇರಿದು ಮಂಗಳವಾರ ಕೊಲೆ ಮಾಡಲಾಗಿದೆ.

‘ದೇವರಜೀವನಹಳ್ಳಿ (ಡಿ.ಜೆ. ಹಳ್ಳಿ) ಠಾಣೆಯ ರೌಡಿ ಪಟ್ಟಿಯಲ್ಲಿ ಕರೀಂ ಅಲಿ ಹೆಸರಿತ್ತು. ಆತನ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು’ ಎಂದು ಪೊಲೀಸರು ಹೇಳಿದರು.

‘ಕರೀಂ ಅಲಿ ಇನ್ನೊಬ್ಬ ರೌಡಿಯ ಪತ್ನಿ ಜೊತೆ ಸಲುಗೆ ಇಟ್ಟುಕೊಂಡಿದ್ದನೆಂದು ಗೊತ್ತಾಗಿದೆ. ಆ ರೌಡಿ ಹಾಗೂ ಆತನ ಸಹಚರರು ಕೊಲೆ ಮಾಡಿರುವ ಮಾಹಿತಿ ಇದೆ. ಆರೋಪಿಗಳು ತಲೆಮರೆಸಿಕೊಂಡಿದ್ದಾರೆ’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.