ಬೆಂಗಳೂರು: ಜ್ಞಾನ ಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ವಿಶ್ವೇಶ್ವರಯ್ಯ ಲೇಔಟ್ನಲ್ಲಿ ಸೋಮವಾರ ಬೆಳ್ಳಂಬೆಳಿಗ್ಗೆ ರೌಡಿಶೀಟರ್ ರಾಹುಲ್ ಅಲಿಯಾಸ್ ಗೋವಿಂದನ ಕಾಲಿಗೆ ಪೊಲೀಸರು ಗುಂಡು ಹೊಡೆದು ಬಂಧಿಸಿದ್ದಾರೆ.
ಇದೇ ತಿಂಗಳ 22ರಂದು ವೇದಮೂರ್ತಿ ಎಂಬುವವರ ಕೊಲೆಗೆ ರಾಹುಲ್ ಯತ್ನಿಸಿದ್ದ. ಅಲ್ಲದೆ, ಅವನ ವಿರುದ್ಧ ಬ್ಯಾಟರಾಯನಪುರ ಮತ್ತು ಚಾಮರಾಜಪೇಟೆ ಠಾಣೆಗಳ ವ್ಯಾಪ್ತಿಯಲ್ಲಿ ದರೋಡೆ, ಕೊಲೆ ಯತ್ನ ಸೇರಿದಂತೆ 11 ಪ್ರಕರಣಗಳು ದಾಖಲಾಗಿವೆ.
ತಲೆಮರೆಸಿಕೊಂಡಿದ್ದ ರಾಹುಲ್, ವಿಶ್ವೇಶ್ವರಯ್ಯ ಲೇಔಟ್ನಲ್ಲಿರುವ ಓಡಾಡುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು.ತಕ್ಷಣ ಅಲ್ಲಿಗೆ ತೆರಳಿದ ಪ್ರಸಾದ್ ಮತ್ತು ತಂಡ ಆತನನ್ನು ಬಂಧಿಸಲು ಮುಂದಾಗುತ್ತಿದ್ದಂತೆ, ಆತ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದ. ಕಾನ್ಸ್ಟೆಬಲ್ ಪ್ರಕಾಶ್ ಮೇಲೆ ಲಾಂಗ್ ಬೀಸಿದ್ದ. ಪ್ರಸಾದ್ ಅವರು ಮೊದಲು ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಆರೋಪಿಗೆ ಸೂಚಿಸಿದ್ದರು.
ಆದರೆ, ಆರೋಪಿ ಹಲ್ಲೆ ನಡೆಸಲು ಯತ್ನಿಸಿದಾಗ ಆತನ ಕಾಲಿಗೆ ಪ್ರಸಾದ್ ಗುಂಡು ಹೊಡೆದಿದ್ದಾರೆ. ಗಾಯಗೊಂಡಿರುವ ರಾಹುಲ್ನನ್ನು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.