ADVERTISEMENT

ಬೆಂಗಳೂರು: ಸಿದ್ದರಾಮಯ್ಯ ಭಾಷಣಕ್ಕೆ ಬಿಜೆಪಿ ಕಾರ್ಯಕರ್ತರಿಂದ ಅಡ್ಡಿ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2020, 15:44 IST
Last Updated 27 ಅಕ್ಟೋಬರ್ 2020, 15:44 IST
ಸಿದ್ದರಾಮಯ್ಯ ಭಾಷಣಕ್ಕೆ ಬಿಜೆಪಿ ಕಾರ್ಯಕರ್ತರಿಂದ ಅಡ್ಡಿ
ಸಿದ್ದರಾಮಯ್ಯ ಭಾಷಣಕ್ಕೆ ಬಿಜೆಪಿ ಕಾರ್ಯಕರ್ತರಿಂದ ಅಡ್ಡಿ   

ಬೆಂಗಳೂರು: ಆರ್‌.ಆರ್‌.ನಗರ ಕ್ಷೇತ್ರದ ಯಶವಂತಪುರ ಬಿ.ಕೆ. ನಗರದಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಭಾಷಣಕ್ಕೆ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿದರು.

ಸಿದ್ದರಾಮಯ್ಯ ಮತ್ತು ಪಕ್ಷದ ಅಭ್ಯರ್ಥಿ ಕುಸುಮಾ ಅವರಿದ್ದ ವಾಹನ ಮುಂದಕ್ಕೆ ಚಲಿಸದಂತೆ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿದರು. ಆದರೆ, ಸಿದ್ದರಾಮಯ್ಯ ಅವರು ವಾಪಸು ಹೋಗಲು ಒಪ್ಪಲಿಲ್ಲ.

ದಾಂಧಲೆ ನಡೆಸುತ್ತಿರುವವರನ್ನು ಬಂಧಿಸುವಂತೆ ಸ್ಥಳದಲ್ಲಿದ್ದ ಪೊಲೀಸರಿಗೆ ಸೂಚಿಸಿದ ಸಿದ್ದರಾಮಯ್ಯ, ತಕ್ಷಣ ಕ್ರಮ ತೆಗೆದುಕೊಳ್ಳದಿದ್ದರೆ ‘ನಿಮ್ಮ ಮನೆಯ ಮುಂದೆ ಧರಣಿ ನಡೆಸಬೇಕಾಗುತ್ತದೆ’ ಎಂದೂ ಎಚ್ಚರಿಕೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.