ADVERTISEMENT

ನಿವೃತ್ತ ಐಪಿಎಸ್ ಅಧಿಕಾರಿ ಕೆ.ವಿ. ರವೀಂದ್ರನಾಥ ಠಾಗೋರ್ ನಿಧನ

​ಪ್ರಜಾವಾಣಿ ವಾರ್ತೆ
Published 12 ಮೇ 2021, 11:32 IST
Last Updated 12 ಮೇ 2021, 11:32 IST
ಕೆ.ವಿ. ರವೀಂದ್ರನಾಥ ಠಾಗೋರ್
ಕೆ.ವಿ. ರವೀಂದ್ರನಾಥ ಠಾಗೋರ್    

ಬೆಂಗಳೂರು: ನಿವೃತ್ತ ಐಪಿಎಸ್ ಅಧಿಕಾರಿ ಕೆ.ವಿ.ರವೀಂದ್ರನಾಥ ಠಾಗೋರ್ (72) ಕೋವಿಡ್‌ನಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು.

ಶೃಂಗೇರಿಯವರಾದ ಇವರು ಬೆಂಗಳೂರಿನ ಜಯನಗರದಲ್ಲಿ ವಾಸವಿದ್ದರು. ಇವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ.

ಇವರು ವಾರ್ತಾ ಇಲಾಖೆಯ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. 2006ರಲ್ಲಿ ನಡೆದ ಶ್ರವಣಬೆಳಗೊಳ ಶ್ರೀಬಾಹುಬಲಿ ಮಹಾಮಸ್ತಕಾಭಿಷೇಕದ ಪ್ರಚಾರ ಉಸ್ತುವಾರಿಯಾಗಿದ್ದರು.

ADVERTISEMENT

ಪ್ರಸ್ತುತ ಪುರವಂಕರ ಸುಚಿತ್ರ ಸಿನಿ ಮತ್ತು ಸಾಂಸ್ಕೃತಿಕ ಟ್ರಸ್ಟ್‌ನ ಅಧ್ಯಕ್ಷರೂ ಆಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.