ADVERTISEMENT

ರುದ್ರೇಶ್ ಹತ್ಯೆ: ಆರೋಪಿ ಜಾಮೀನು ಅರ್ಜಿ ವಜಾ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2020, 21:33 IST
Last Updated 14 ಡಿಸೆಂಬರ್ 2020, 21:33 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ಆರ್‌ಎಸ್‌ಎಸ್‌ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣದ ಆರೋಪಿ ಆಸೀಮ್ ಶರೀಫ್ ಅನಾರೋಗ್ಯದ ಕಾರಣ ನೀಡಿ ಕೋರಿದ್ದ ಜಾಮೀನು ಕ್ರಿಮಿನಲ್ ಮೇಲ್ಮನವಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಎನ್‌ಐಎ ವಿಶೇಷ ನ್ಯಾಯಾಲಯ ಜಾಮೀನು ನಿರಾಕರಿಸಿ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಐದನೇ ಆರೋಪಿ ಆಸೀಮ್ ಮೇಲ್ಮನವಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ಮೇಲ್ಮನವಿಯಲ್ಲಿ ಜಾಮೀನಿಗೆ ಅನಾರೋಗ್ಯ ಮತ್ತು ವಿಚಾರಣೆ ವಿಳಂಬದ ಕಾರಣಗಳನ್ನು ನೀಡಲಾಗಿದೆ. ಆದರೆ, ಆರೋಪಿಯ ಹೃದಯ ಸಂಬಂಧಿ ಕಾಯಿಲೆ ಕುರಿತು ಜಯದೇವ ಹೃದ್ರೋಗ ಸಂಸ್ಥೆಯ 2020ರ ಸೆ.6ರ ವರದಿ ಆಧರಿಸಿ ಎನ್‌ಐಎ ವಿಶೇಷ ನ್ಯಾಯಾಲಯ ಸೆ.8ರಂದು ಜಾಮೀನು ನಿರಾಕರಿಸಿ ಆದೇಶಿಸಿತ್ತು. ಹೀಗಾಗಿ, ಮೇಲ್ಮನವಿಯಲ್ಲಿ ಈ ಅಂಶ ಪರಿಗಣಿಸಲು ಸಾಧ್ಯವಿಲ್ಲ‘ ಎಂದು ಅಭಿಪ್ರಾಯಪಟ್ಟಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.