ಬೆಂಗಳೂರು: ಆರ್ಎಸ್ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣದ ಆರೋಪಿ ಆಸೀಮ್ ಶರೀಫ್ ಅನಾರೋಗ್ಯದ ಕಾರಣ ನೀಡಿ ಕೋರಿದ್ದ ಜಾಮೀನು ಕ್ರಿಮಿನಲ್ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಎನ್ಐಎ ವಿಶೇಷ ನ್ಯಾಯಾಲಯ ಜಾಮೀನು ನಿರಾಕರಿಸಿ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಐದನೇ ಆರೋಪಿ ಆಸೀಮ್ ಮೇಲ್ಮನವಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ಮೇಲ್ಮನವಿಯಲ್ಲಿ ಜಾಮೀನಿಗೆ ಅನಾರೋಗ್ಯ ಮತ್ತು ವಿಚಾರಣೆ ವಿಳಂಬದ ಕಾರಣಗಳನ್ನು ನೀಡಲಾಗಿದೆ. ಆದರೆ, ಆರೋಪಿಯ ಹೃದಯ ಸಂಬಂಧಿ ಕಾಯಿಲೆ ಕುರಿತು ಜಯದೇವ ಹೃದ್ರೋಗ ಸಂಸ್ಥೆಯ 2020ರ ಸೆ.6ರ ವರದಿ ಆಧರಿಸಿ ಎನ್ಐಎ ವಿಶೇಷ ನ್ಯಾಯಾಲಯ ಸೆ.8ರಂದು ಜಾಮೀನು ನಿರಾಕರಿಸಿ ಆದೇಶಿಸಿತ್ತು. ಹೀಗಾಗಿ, ಮೇಲ್ಮನವಿಯಲ್ಲಿ ಈ ಅಂಶ ಪರಿಗಣಿಸಲು ಸಾಧ್ಯವಿಲ್ಲ‘ ಎಂದು ಅಭಿಪ್ರಾಯಪಟ್ಟಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.