ADVERTISEMENT

‘ಕೇಂದ್ರ ಸರ್ಕಾರದಿಂದ ಐತಿಹಾಸಿಕ ನಿರ್ಧಾರ’

​ಪ್ರಜಾವಾಣಿ ವಾರ್ತೆ
Published 30 ಜನವರಿ 2019, 19:21 IST
Last Updated 30 ಜನವರಿ 2019, 19:21 IST
ಎಸ್‌.ಎಂ.ಕೃಷ್ಣ
ಎಸ್‌.ಎಂ.ಕೃಷ್ಣ   

ಬೆಂಗಳೂರು: ಅಯೋಧ್ಯೆಯಲ್ಲಿ ವಿವಾದರಹಿತ 67 ಎಕರೆ ಜಾಗವನ್ನು ರಾಮ ಮಂದಿರ ನಿರ್ಮಾಣಕ್ಕೆ ಬಿಟ್ಟುಕೊಡಲು ಅನುಮತಿ ನೀಡುವಂತೆ ಸುಪ್ರೀಂ ಕೋರ್ಟ್‌ ಮೊರೆ ಹೋಗಲು ನಿರ್ಧರಿಸಿರುವ ಕೇಂದ್ರ ಸರ್ಕಾರದ ನಡೆಯನ್ನು ಬಿಜೆಪಿ ಹಿರಿಯ ಮುಖಂಡ ಎಸ್.ಎಂ. ಕೃಷ್ಣ ಸ್ವಾಗತಿಸಿದ್ದಾರೆ.

‘ರಾಮ ಮಂದಿರ ನಿರ್ಮಾಣಕ್ಕೆ ಮುಂದಾಗಿರುವ ವಿಶ್ವ ಹಿಂದೂ ಪರಿಷತ್‌ ಮತ್ತು ಇತರ ಸಂಘಟನೆಗಳಿಗೆ ವಿವಾದರಹಿತ ಜಮೀನು ಹಸ್ತಾಂತರಿಸಲು ಕೇಂದ್ರ ಮುಂದಾಗಿರುವುದು ಐತಿಹಾಸಿಕ ತೀರ್ಮಾನ. ಕೋಟ್ಯಂತರ ಜನರ ಭಾವನೆಗಳಿಗೆ ಈ ಮೂಲಕ ನರೇಂದ್ರ ಮೋದಿ ಸರ್ಕಾರ ಸ್ಪಂದಿಸಿ, ಗೌರವ ನೀಡಿರುವುದು ಎಲ್ಲರೂ ಮೆಚ್ಚುವಂಥ ಸಂಗತಿ’ ಎಂದೂ ಅವರು ಹೇಳಿದ್ದಾರೆ.

ಇನ್ನಷ್ಟು ಸುದ್ದಿಗಳು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.