ಬೆಂಗಳೂರು: ವೃದ್ಧ ದಂಪತಿ ನೆಲೆಸಿದ್ದ ಮನೆಗೆ ರಾತ್ರಿ ವೇಳೆ ನುಗ್ಗಿ, ಚಾಕುವಿನಿಂದ ಬೆದರಿಸಿ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಸುದ್ದಗುಂಟೆಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಿಂದ ₹4.5 ಲಕ್ಷ ಮೌಲ್ಯದ 110 ಗ್ರಾಂ ಚಿನ್ನಾಭರಣ ಹಾಗೂ ₹4 ಸಾವಿರ ನಗದು ಜಪ್ತಿ ಮಾಡಲಾಗಿದೆ.
‘ಠಾಣಾ ವ್ಯಾಪ್ತಿಯ ಕೃಷ್ಣಮೂರ್ತಿ ಬಡಾವಣೆಯ ಮನೆಯೊಂದರ ಮೊದಲ ಮಹಡಿಯಲ್ಲಿ ವೃದ್ಧ ದಂಪತಿ ವಾಸವಿದ್ದರು.ನ.26ರ ರಾತ್ರಿ ಮನೆಗೆ ನುಗ್ಗಿದ್ದ ಆರೋಪಿಗಳು ಚಾಕು ತೋರಿಸಿ ದಂಪತಿ ಬಳಿ ಇದ್ದ ಚಿನ್ನದ ಸರ, ಮಾಂಗಲ್ಯ ಸರ, 5 ಚಿನ್ನದ ಉಂಗುರ ಹಾಗೂ ₹15 ಸಾವಿರ ನಗದು ಕಸಿದುಕೊಂಡು ಪರಾರಿಯಾಗಿದ್ದರು. ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿತ್ತು’ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.