ಬೆಂಗಳೂರು: ಒಳಚರಂಡಿ ಮತ್ತು ಗುಂಡಿಗಳನ್ನು ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಸಫಾಯಿ ಕರ್ಮಚಾರಿಗಳ ಸಾವು ಮತ್ತು ಅವಘಡಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಲಮಂಡಳಿಯು ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ನಾಟಕಗಳನ್ನು ಆಯೋಜಿಸಿದೆ.
ದಿನಕ್ಕೆ ಮೂರು ಸ್ಥಳದಲ್ಲಿ ಈ ನಾಟಕಗಳು ಪ್ರದರ್ಶನಗೊಳ್ಳಲಿವೆ. ಈ ತಿಂಗಳ ಕೊನೆಯವರೆಗೆ ಪ್ರದರ್ಶನ ನಡೆಯಲಿದೆ ಎಂದು ಅದು ಹೇಳಿದೆ.
ಸಾರ್ವಜನಿಕರು ಅಷ್ಟೇ ಅಲ್ಲದೆ, ಸಫಾಯಿ ಕರ್ಮಚಾರಿಗಳು ಹಾಗೂ ಸ್ಥಳಿಯ ಸಂಸ್ಥೆಗಳಲ್ಲಿ ಅರಿವು ಮೂಡಿಸಲು ಮತ್ತು ಮಲ ಹೊರುವ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಸಲುವಾಗಿ ವಿಚಾರ ವಿನಿಮಯ ಕಾರ್ಯಕ್ರಮಗಳ ಮೂಲಕ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಮಂಡಳಿಯು ತಮಟೆ ಗ್ರಾಮೀಣ ಸಬಲೀಕರಣ ಕೇಂದ್ರದ ಸಹಯೋಗದೊಂದಿಗೆ ರಕ್ಷೆ-ಸುರಕ್ಷೆ ಎಂಬ ಘೋಷವಾಕ್ಯದಡಿಯಲ್ಲಿ ಈ ಅಭಿಯಾನ ನಡೆಸುತ್ತಿದೆ. ಸುರಕ್ಷತೆಗೆ ಆದ್ಯತೆ ನೀಡುವಂತೆ ಜಾಗೃತಿ ಮೂಡಿಸುವ ಕೆಲಸ ಈ ಬೀದಿ ನಾಟಕಗಳ ಮೂಲಕ ಆಗಲಿದೆ ಎಂದು ಮಂಡಳಿ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.