ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ಜ.8 ಮತ್ತು 9ರಂದು ನಡೆಸಲು ಉದ್ದೇಶಿಸಿದ್ದ ಅಖಿಲ ಭಾರತೀಯ ಸಾಹಿತ್ಯ ಪರಿಷದ್ (ಅಭಾಸಾಪ) ರಾಜ್ಯ ಅಧಿವೇಶನವನ್ನು ಮುಂದೂಡಲಾಗಿದೆ.
‘ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದ್ದವು. ಸರ್ಕಾರ ಕೋವಿಡ್ ನಿಯಮ ಜಾರಿಗೊಳಿಸಿರುವುದರಿಂದ ಮುಂದೂಡುವುದು ಅನಿವಾರ್ಯವಾಗಿದೆ. ನಿಯಮಗಳನ್ನು ವಾಪಸ್ ಪಡೆದ ಬಳಿಕ ಉಜಿರೆಯಲ್ಲೇ ಈ ಸಮ್ಮೇಳನ ನಡೆಯಲಿದೆ’ ಎಂದು ಅಭಾಸಾಪ ರಾಜ್ಯ ಪ್ರಧಾನ ಕಾರ್ಯದರ್ಶಿ ರಘುನಂದನ ಭಟ್ಟ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.