ADVERTISEMENT

ಕೊರೊನಾ ದೃಢ; ವಿಚಾರಣೆಗೆ ಸಂಪತ್ ರಾಜ್ ಗೈರು

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2020, 16:52 IST
Last Updated 18 ಸೆಪ್ಟೆಂಬರ್ 2020, 16:52 IST

ಬೆಂಗಳೂರು: ದೇವರ ಜೀವನಹಳ್ಳಿ (ಡಿ.ಜೆ.ಹಳ್ಳಿ) ಗಲಭೆ ಪ್ರಕರಣದ ವಿಚಾರಣೆಗೆ ಮಾಜಿ ಮೇಯರ್‌ ಆರ್‌. ಸಂಪತ್ ರಾಜ್ ಗೈರಾಗಿದ್ದಾರೆ.

‘ಆಗಸ್ಟ್ 11ರಂದು ರಾತ್ರಿನಡೆದ ಗಲಭೆ ಸಂಬಂಧ ಶುಕ್ರವಾರ ಬೆಳಿಗ್ಗೆ ವಿಚಾರಣೆಗಾಗಿ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಬನ್ನಿ’ ಎಂದು ಪೊಲೀಸರು ನೋಟಿಸ್ ನೀಡಿದ್ದರು. ಅದಕ್ಕೆ ಉತ್ತರಿಸಿರುವ ಸಂಪತ್‌ ರಾಜ್, ‘ಕೊರೊನಾ ದೃಢಪಟ್ಟಿರುವುದರಿಂದ ವಿಚಾರಣೆಗೆ ಬರಲು ಆಗುತ್ತಿಲ್ಲ. ಗುಣಮುಖವಾದ ನಂತರ ಕಚೇರಿಗೆ ಬರುತ್ತೇನೆ’ ಎಂದಿದ್ದಾರೆ.

ಪೊಲೀಸ್ ಅಧಿಕಾರಿಯೊಬ್ಬರು, ‘ನೋಟಿಸ್‌ಗೆ ಸಂಪತ್ ರಾಜ್ ಪ್ರತಿಕ್ರಿಯಿಸಿದ್ದಾರೆ. ತನಿಖೆಗೆ ಸಹಕರಿಸುವುದಾಗಿ ಹೇಳಿದ್ದಾರೆ. ಗುಣಮುಖವಾದ ನಂತರ ವಿಚಾರಣೆಗೆ ಕರೆಯಲಾಗುವುದು’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.