ADVERTISEMENT

ಸಿಗರೇಟ್ ಹಣ ಕೇಳಿದ್ದಕ್ಕೆ ಕಾದ ಎಣ್ಣೆ ಎರಚಿದ ರೌಡಿ

ಸಂಪಿಗೆಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಘಟನೆ; ಮಹಿಳೆಗೆ ತೀವ್ರ ಗಾಯ  

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2020, 19:11 IST
Last Updated 1 ಅಕ್ಟೋಬರ್ 2020, 19:11 IST
   

ಬೆಂಗಳೂರು: ಸಿಗರೇಟ್ ಹಣ ಕೇಳಿದರು ಎಂಬ ಕಾರಣಕ್ಕೆ ರೌಡಿ ಹನೀಫ್ ಎಂಬಾತ ಅಂಗಡಿ ಮಾಲೀಕರಾದ ಮೇಘಲಾ (38) ಎಂಬುವರ ಮೇಲೆ ಕಾದ ಎಣ್ಣೆ ಎರಚಿದ್ದು, ಈ ಸಂಬಂಧ ಸಂಪಿಗೆಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಕೃತ್ಯದಿಂದಾಗಿ ಅಮರಜ್ಯೋತಿ ಲೇಔಟ್ ನಿವಾಸಿ ಮೇಘಲಾ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರೌಡಿ ಹನೀಫ್ ತಲೆಮರೆಸಿಕೊಂಡಿದ್ದಾನೆ’ ಎಂದು ಪೊಲೀಸರು ಹೇಳಿದರು.

‘ಅಮರಜ್ಯೋತಿ ಲೇಔಟ್‌ನಲ್ಲಿ ಮೇಘಲಾ ಅಂಗಡಿ ಇಟ್ಟುಕೊಂಡಿದ್ದಾರೆ. ಸೆ. 30ರಂದು ರಾತ್ರಿ 7.30ರ ಸುಮಾರಿಗೆ ಸಹಚರರ ಜೊತೆ ಅಂಗಡಿಗೆ ಬಂದಿದ್ದ ಹನೀಫ್, ಸಿಗರೇಟ್ ಪಡೆದು ಸೇದಿದ್ದ. ಹಣ ಕೊಟ್ಟಿರಲಿಲ್ಲ. ಅದನ್ನು ಪ್ರಶ್ನಿಸಿದ್ದ ಮಹಿಳೆ, ಹಣ ಕೊಡುವಂತೆ ಕೋರಿದ್ದರು’.

ADVERTISEMENT

‘ಇಬ್ಬರ ನಡುವೆಯೂ ಮಾತಿನ ಚಕಮಕಿ ನಡೆದಿತ್ತು. ಅಂಗಡಿಯಲ್ಲಿ ಬೊಂಡಾ ಭಜ್ಜಿ ಮಾಡಲು ಕಾಯಿಸಿದ್ದ ಎಣ್ಣೆಯನ್ನೇ ಹನೀಫ್ ಮಹಿಳೆ ಮೇಲೆ ಎರಚಿ ಪರಾರಿಯಾಗಿದ್ದಾನೆ. ಮಹಿಳೆಯ ದೇಹದ ಶೇ 30ರಷ್ಟು ಭಾಗ ಸುಟ್ಟಿದೆ’ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.