ADVERTISEMENT

ಮರಳು ಸಮಸ್ಯೆ: ಕಾಂಗ್ರೆಸ್‌ ಧರಣಿ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2020, 23:40 IST
Last Updated 20 ಮಾರ್ಚ್ 2020, 23:40 IST

ಬೆಂಗಳೂರು: ರಾಜ್ಯದ ಮರಳು ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶಕ್ಕೆ ಒತ್ತಾಯಿಸಿ ಕಾಂಗ್ರೆಸ್‌ನ ಯು.ಟಿ.ಖಾದರ್‌ ಹಾಗೂ ಅಮರೇಗೌಡ ಬಯ್ಯಾಪುರ ವಿಧಾನ ಸಭಾಧ್ಯಕ್ಷರ ಪೀಠದ ಎದುರು ಶುಕ್ರವಾರ ಧರಣಿ ನಡೆಸಿದರು.

ಮರಳು ಸಮಸ್ಯೆ ಬಗ್ಗೆ ಬಿಜೆಪಿಯ ಸಂಜೀವ ಮಠಂದೂರು ಅವರ ಪ್ರಶ್ನೆಗೆ ಉತ್ತರಿಸಿದ ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ.ಪಾಟೀಲ, ರಾಜ್ಯದಲ್ಲಿ ಮರಳು ನೀತಿ ಜಾರಿಗೆ ರೂಪರೇಷೆ ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿದರು.

‘ಮರಳಿನ ಸಮಸ್ಯೆ ಗಂಭೀರವಾಗಿದೆ. ಎಲ್ಲಿಯೂ ಸಿಗುತ್ತಿಲ್ಲ. ಈ ಬಗ್ಗೆ ಚರ್ಚೆ ಆಗಬೇಕು ಎಂದು ಕಾಂಗ್ರೆಸ್‌, ಜೆಡಿಎಸ್‌ನ ಸದಸ್ಯರು ಒತ್ತಾಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.