ADVERTISEMENT

ವಿದ್ಯುತ್ ಸ್ಪರ್ಶದಿಂದ ಕಲಾವಿದ ಸಾವು: ಐವರ ವಿರುದ್ಧ ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2021, 6:00 IST
Last Updated 10 ಆಗಸ್ಟ್ 2021, 6:00 IST
ಕಲಾವಿದ ವಿವೇಕ್
ಕಲಾವಿದ ವಿವೇಕ್   

ರಾಮನಗರ: ವಿದ್ಯುತ್ ಸ್ಪರ್ಶದಿಂದ ಕಲಾವಿದ ವಿವೇಕ್ ಸಾವು ಪ್ರಕರಣಕ್ಕೆ ಸಂಬಂಧಿಸಿ ಐವರ ವಿರುದ್ಧ ಬಿಡದಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಚಿತ್ರದ ನಿರ್ದೇಶಕ ಶಂಕರ್ ಅವರನ್ನು ಮೊದಲ ಆರೋಪಿಯನ್ನಾಗಿ ಮಾಡಲಾಗಿದೆ. ನಿರ್ಮಾಪಕ ಗುರು ದೇಶಪಾಂಡೆ ಅವರನ್ನು ಎರಡನೇ ಆರೋಪಿಯನ್ನಾಗಿ ಹೆಸರಿಸಲಾಗಿದೆ. ಸಾಹಸ ನಿರ್ದೇಶಕ ವಿನೋದ್, ಚಿತ್ರೀಕರಣದ ಉಸ್ತುವಾರಿ ಫರ್ನಾಂಡಿಸ್, ಕ್ರೇನ್ ಆಪರೇಟರ್ ಮಹೇಂದ್ರ ಅವರನ್ನು ಕ್ರಮವಾಗಿ ನಂತರದ ಆರೋಪಿಗಳನ್ನಾಗಿ ಹೆಸರಿಸಲಾಗಿದೆ.

ಇದರಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಈಗಾಗಲೇ ವಿಚಾರಣೆಗೆ ಒಳಪಡಿಸಿದ್ದಾರೆ. ನಿರ್ಮಾಪಕ ಗುರು ದೇಶಪಾಂಡೆ ಸದ್ಯ ನಾಪತ್ತೆ ಆಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.