ADVERTISEMENT

ರೈಲ್ವೆ ಕೌಂಟರ್‌ ಸಮಯ ಬದಲು

​ಪ್ರಜಾವಾಣಿ ವಾರ್ತೆ
Published 28 ಜೂನ್ 2020, 22:00 IST
Last Updated 28 ಜೂನ್ 2020, 22:00 IST
ಕೆಎಸ್‌ಆರ್‌ ರೈಲು ನಿಲ್ದಾಣ
ಕೆಎಸ್‌ಆರ್‌ ರೈಲು ನಿಲ್ದಾಣ   

ಬೆಂಗಳೂರು: ರಾಜ್ಯದಲ್ಲಿ ಕರ್ಫ್ಯೂ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರು ಟಿಕೆಟ್ ಕಾಯ್ದಿರಿಸುವ ಕೌಂಟರ್‌ಗಳ ಕಾರ್ಯನಿರ್ವಹಣೆ ಅವಧಿಯನ್ನು ರೈಲ್ವೆ ಇಲಾಖೆ ಬದಲಾಯಿಸಿದೆ.

ಬೆಳಿಗ್ಗೆ 8ರಿಂದ ಸಂಜೆ 6ರ ತನಕ ಈ ಕೌಂಟರ್‌ಗಳು ಕಾರ್ಯನಿರ್ವಹಿಸಲಿವೆ. ಭಾನುವಾರ ಸಂಪೂರ್ಣ ಕರ್ಫ್ಯೂ ಇರುವ ಹಿನ್ನೆಲೆಯಲ್ಲೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ(ಕೆಎಸ್‌ಆರ್‌) ರೈಲು ನಿಲ್ದಾಣ ಹೊರತುಪಡಿಸಿ ಉಳಿದ ಕೌಂಟರ್‌ಗಳ ಕಾರ್ಯನಿರ್ವಹಣೆ ಇರುವುದಿಲ್ಲ. ಕೆಎಸ್‌ಆರ್‌ ರೈಲು ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ 8ರಿಂದ ಮಧ್ಯಾಹ್ನ 2ರವರೆಗೆ ಕಾರ್ಯನಿರ್ವಹಿಸಲಿದೆ’ ಎಂದು ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT