ADVERTISEMENT

ಮಹಿಳಾ ಸಬಲೀಕರಣಕ್ಕೆ ನಿಂತ ‘ಸಂಜೀವಿನಿ’

​ಪ್ರಜಾವಾಣಿ ವಾರ್ತೆ
Published 6 ಜುಲೈ 2019, 19:18 IST
Last Updated 6 ಜುಲೈ 2019, 19:18 IST
ಕಾರ್ಯಕ್ರಮದಲ್ಲಿ ಬಿ.ಆರ್‌.ಮಮತಾ ಹಾಗೂ ಈಶ್ವರ ದೈತೋಟ ಮಾತುಕತೆಯಲ್ಲಿ ತೊಡಗಿದ್ದರು. ಹಿರಿಯ ಪತ್ರಕರ್ತೆಯರಾದ ನಾಗಮಣಿ ಎಸ್‌.ರಾವ್, ಕುಶಲಾ ಡಿಮೆಲ್ಲೊ, ಸುಶೀಲ ಸುಬ್ರಹ್ಮಣ್ಯ ಹಾಗೂ ವಿಜಯ ಇದ್ದಾರೆ –ಪ್ರಜಾವಾಣಿ ಚಿತ್ರ
ಕಾರ್ಯಕ್ರಮದಲ್ಲಿ ಬಿ.ಆರ್‌.ಮಮತಾ ಹಾಗೂ ಈಶ್ವರ ದೈತೋಟ ಮಾತುಕತೆಯಲ್ಲಿ ತೊಡಗಿದ್ದರು. ಹಿರಿಯ ಪತ್ರಕರ್ತೆಯರಾದ ನಾಗಮಣಿ ಎಸ್‌.ರಾವ್, ಕುಶಲಾ ಡಿಮೆಲ್ಲೊ, ಸುಶೀಲ ಸುಬ್ರಹ್ಮಣ್ಯ ಹಾಗೂ ವಿಜಯ ಇದ್ದಾರೆ –ಪ್ರಜಾವಾಣಿ ಚಿತ್ರ   

ಬೆಂಗಳೂರು:‘ಗ್ರಾಮೀಣ ಭಾಗದ ಮಹಿಳೆಯರ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ ‘ಸಂಜೀವಿನಿ’ ಸಂಘಗಳು ಬೆನ್ನೆಲುಬಾಗಿ ಕಾರ್ಯನಿರ್ವಹಿಸುತ್ತಿವೆ’ ಎಂದು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್‌ (ಎನ್ಆರ್‌ಎಲ್‌ಎಂ) ನಿರ್ದೇಶಕಿ ಬಿ.ಆರ್‌.ಮಮತಾ ಹೇಳಿದರು.

ಕರ್ನಾಟಕ ಪತ್ರಕರ್ತೆಯರ ಸಂಘ ಹಾಗೂ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್‌ ವತಿಯಿಂದ ನಗರದಲ್ಲಿ ಶನಿವಾರ ಆಯೋಜಿಸಿದ್ದ ‘ಪತ್ರಿಕಾ ದಿನಾಚರಣೆ’ ಹಾಗೂ ‘ಪತ್ರಕರ್ತೆಯರ ಸಮ್ಮಿಲನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.‌

‘ಗ್ರಾಮೀಣ ಭಾಗದ ಮಹಿಳೆಯರ ಅಭಿವೃದ್ಧಿಗಾಗಿ ಜನ್ಮತಾಳಿದ ಸಂಜೀವಿನಿ ಸಂಘ ಇಂದು ರಾಜ್ಯದ ಕುಗ್ರಾಮಗಳನ್ನು ತಲುಪಿದೆ.ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿಯಲ್ಲಿ ‘ಸಂಜೀವಿನಿ ಸೀರೆ’ ಯೋಜನೆಗಳಿಗೆ ಸಿದ್ಧತೆ ನಡೆಸಲಾಗುತ್ತಿದೆ. ಈ ಸೀರೆಗಳಿಗೆ ಆಯಾ ಜಿಲ್ಲೆಗಳ ಹೆಸರಿಡಲಾಗುವುದು. ಸಂಘದ ವತಿಯಿಂದ ಮಹಿಳೆಯರಿಗೆ ಸಾಲ ಸೌಲಭ್ಯ ನೀಡಿ ಪ್ರೋತ್ಸಾಹಿಸಲಾಗುವುದು. ಆಸಕ್ತರು ತಮ್ಮ ಸ್ಥಳಿಯ ಮಟ್ಟದ ಸಂಜೀವಿನಿ ಸಂಘಕ್ಕೆ ಸೇರಬಹುದು’ ಎಂದರು.

ADVERTISEMENT

ಹಿರಿಯ ಪತ್ರಕರ್ತ ಈಶ್ವರ ದೈತೋಟ ಮಾತನಾಡಿ, ‘ವಿದ್ಯುನ್ಮಾನ ಮಾಧ್ಯಮದಲ್ಲಿಪ್ರಸ್ತುತ ಶೇ 40ರಷ್ಟು ಮಹಿಳೆಯರು ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ, ಮುದ್ರಣ ಮಾಧ್ಯಮದಲ್ಲಿ ಮಹಿಳೆಯರ ಪ್ರಮಾಣ ಈಗಲೂ ಕಡಿಮೆ ಇದೆ. ಈ ಕ್ಷೇತ್ರದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಳ್ಳಬೇಕು’ ಎಂದರು.

ರಾಜ್ಯದ ವಿವಿಧ ಮಹಿಳಾ ಸಂಘಗಳ ಸದಸ್ಯರು ತಯಾರಿಸಿದ್ದ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟವನ್ನು ಏರ್ಪಡಿಸಲಾಗಿತ್ತು.ಹಿರಿಯ ಪತ್ರಕರ್ತೆಯರಾದ ಕುಶಲಾ ಡಿಮೆಲ್ಲೊ,ಕೆ.ಎಚ್.ಸಾವಿತ್ರಿ,ಡಾ.ವಿಜಯಮ್ಮ,ನಾಗಮಣಿ ಎಸ್.ರಾವ್, ಪಿ.ಸುಶೀಲಾ, ಗಾಯತ್ರಿ ಚಂದ್ರಶೇಖರ್ ಅವರನ್ನು ಸನ್ಮಾನಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.