ADVERTISEMENT

‘ಸಂಸ್ಕೃತ ಸಾಹಿತ್ಯದ ವಿಸ್ತಾರ ಅಗಾಧ’

ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಲೇಖಕಿ ಸುಧಾಮೂರ್ತಿ ಅಭಿಮತ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2019, 20:30 IST
Last Updated 21 ಏಪ್ರಿಲ್ 2019, 20:30 IST
ಲೇಖಕಿ ಸುಧಾಮೂರ್ತಿ ಪುಸ್ತಕ ಬಿಡುಗಡೆ ಮಾಡಿದರು (ಎಡದಿಂದ) ಬಿ.ಎನ್‌.ಶಶಿಕಿರಣ, ಲೇಖಕ ಶತಾವಧಾನಿ ರಾ.ಗಣೇಶ್‌, ನಾಗಪುರ ಕಾಳಿದಾಸ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಡಾ. ಶ್ರೀನಿವಾಸ ವರಖೇಡಿ, ದೇವುಡು ಪ್ರತಿಷ್ಠಾನದ ಬೆಂಗಳೂರು ಘಟಕದ ಅಧ್ಯಕ್ಷ ಗಂಗಾಧರ ದೇವುಡು, ಅನುವಾದಕ ಜನಾರ್ದನ ಹೆಗಡೆ ಇದ್ದಾರೆ–ಪ್ರಜಾವಾಣಿ ಚಿತ್ರ
ಲೇಖಕಿ ಸುಧಾಮೂರ್ತಿ ಪುಸ್ತಕ ಬಿಡುಗಡೆ ಮಾಡಿದರು (ಎಡದಿಂದ) ಬಿ.ಎನ್‌.ಶಶಿಕಿರಣ, ಲೇಖಕ ಶತಾವಧಾನಿ ರಾ.ಗಣೇಶ್‌, ನಾಗಪುರ ಕಾಳಿದಾಸ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಡಾ. ಶ್ರೀನಿವಾಸ ವರಖೇಡಿ, ದೇವುಡು ಪ್ರತಿಷ್ಠಾನದ ಬೆಂಗಳೂರು ಘಟಕದ ಅಧ್ಯಕ್ಷ ಗಂಗಾಧರ ದೇವುಡು, ಅನುವಾದಕ ಜನಾರ್ದನ ಹೆಗಡೆ ಇದ್ದಾರೆ–ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ಸಂಸ್ಕೃತ ಸಾಹಿತ್ಯದ ವಿಸ್ತಾರ ಲ್ಯಾಟಿನ್‌ ಹಾಗೂ ಗ್ರೀಕ್‌ ಭಾಷೆಗಳ ಎರಡು ಪಟ್ಟು ಪುಸ್ತಕಗಳಿಗೆ ಸಮ’ ಎಂದು ಲೇಖಕಿ ಸುಧಾಮೂರ್ತಿ ಅಭಿಪ್ರಾಯಪಟ್ಟರು.

ಸಂಸ್ಕೃತ ಭಾರತಿ ವತಿಯಿಂದ ನಗರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಲೇಖಕ ಶತಾವಧಾನಿ ರಾ.ಗಣೇಶ್‌ ಅವರು ಅನುವಾದಿಸಿದ ‘ಮಹಾ ಬ್ರಾಹ್ಮಣ’ ಸಂಸ್ಕೃತ ಕೃತಿಯನ್ನುಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.

‘ಎಲ್ಲ ಭಾಷೆಗಳಲ್ಲಿ ವಿಸ್ತೃತವಾಗಿ ಸಾಹಿತ್ಯ ಬೆಳೆಯಲು ಮೂಲ ಬೇರು ಸಂಸ್ಕೃತ ಸಾಹಿತ್ಯ. ಸಂಸ್ಕೃತ ಭಾಷೆ ಶ್ವಾಸವನ್ನು ಶುದ್ಧೀಕರಿಸುವ ಭಾಷೆ’ ಎಂದರು.

ADVERTISEMENT

ಮಕ್ಕಳಿಗೆ ಕಾಳಿದಾಸ ಯಾರು ಎಂದು ಕೇಳಿದರೆ, ಗೂಗಲ್‌ ಮಾಡಿ ಎನ್ನುತ್ತವೆ. ನಿಮ್ಮಮಕ್ಕಳಿಗೆ ಸಂಸ್ಕೃತಿ ಕಲಿಸಿ’ ಎಂದರು.

‘ನಮ್ಮತನ ಹಾಗೂ ನಮ್ಮಸಂಸ್ಕೃತಿಯ ವಿಸ್ಮೃತಿಯಾಗುತ್ತಿರುವ ಈ ಸಂದರ್ಭದಲ್ಲಿ ಸಂಸ್ಕೃತವನ್ನು ಕಲಿಸುವ ಮೂಲಕ ಕಾಳಿದಾಸ ಹಾಗೂ ಇತರೆ ಕವಿಗ
ಳನ್ನು ಮಕ್ಕಳಿಗೆ ತಲುಪಿಸಬೇ ಕಾದ ಅಗತ್ಯವಿದೆ.

ದೊಡ್ಡ ಪ್ರಮಾಣದಲ್ಲಿ ಅಲ್ಲದಿದ್ದರೂ ಚಿಕ್ಕ ಪ್ರಮಾಣ ದಲ್ಲಿ ಈ ಕೆಲಸ ಆಗಬೇಕು’ ಎಂದು ಅಭಿಪ್ರಾಯಪಟ್ಟರು.

‘ಸಂಸ್ಕೃತ ಭಾಷೆಯ ಬೆಳವಣಿಗೆಗೆ ಶ್ರಮಿಸಬೇಕಾದ ಅಗತ್ಯವಿದೆ. ಅದಕ್ಕಾಗಿ ಅದರ ಬೆಳವಣಿಗೆಗೆ ನಮ್ಮಪ್ರತಿಷ್ಠಾನದ ವತಿಯಿಂದ ₹10 ಲಕ್ಷ ನೀಡಲಾಗುವುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.