ಬೆಂಗಳೂರು: ಸೀರೆ ಪಾಲಿಶ್ ಮಾಡುವ ಯಂತ್ರಕ್ಕೆ ಸಿಲುಕಿ ಸಚಿನ್ (14) ಎಂಬಾತ ಮೃತಪಟ್ಟಿದ್ದು, ಈ ಸಂಬಂಧ ಬ್ಯಾಟರಾಯನಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಮೃತ ಸಚಿನ್ನ ಪೋಷಕರು ಉತ್ತರಪ್ರದೇಶದವರು. ಕೆಲಸ ಹುಡುಕಿಕೊಂಡು ಹಲವು ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದರು. ಹೊಸಗುಡ್ಡದಹಳ್ಳಿಯಲ್ಲಿ ನೆಲೆಸಿದ್ದರು’ ಎಂದು ಪೊಲೀಸರು ಹೇಳಿದರು.
‘ಬಾಲಕನ ಅಕ್ಕ, ಹೊಸಗುಡ್ಡದಹಳ್ಳಿಯಲ್ಲಿರುವ ಸೀರೆಗೆ ಪಾಲಿಶ್ ಮಾಡುವ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದರು. ಶನಿವಾರ ಮಧ್ಯಾಹ್ನ ಅಕ್ಕನಿಗೆ ಊಟ ಕೊಡಲೆಂದು ಬಾಲಕ ಸಚಿನ್, ಕೇಂದ್ರಕ್ಕೆ ಬಂದಿದ್ದ. ಊಟ ಕೊಟ್ಟು ವಾಪಸು ಹೋಗುವಾಗ ಆಕಸ್ಮಿಕವಾಗಿ ಯಂತ್ರದ ಬಳಿ ಕೈ ಇಟ್ಟಿದ್ದ. ಕೈ ಯಂತ್ರದೊಳಗೆ ಹೋಗಿ ಮುರಿದಿತ್ತು. ತಲೆಗೂ ಪೆಟ್ಟಾಗಿ ರಕ್ತ ಸೋರುತ್ತಿತ್ತು.’
‘ಕೇಂದ್ರದಲ್ಲಿದ್ದ ಸಿಬ್ಬಂದಿ, ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಬಾಲಕ ಮೃತಪಟ್ಟಿದ್ದಾನೆ. ಬಾಲಕನ ಸಾವಿಗೆ ಯಾರ ನಿರ್ಲಕ್ಷ್ಯ ಕಾರಣವೆಂಬುದು ತನಿಖೆಯಿಂದ ತಿಳಿಯಬೇಕಿದೆ’ ಎಂದೂ ಪೊಲೀಸರು ತಿಳಿಸಿದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.