ADVERTISEMENT

ಜಾರಕಿಹೊಳಿ ಜತೆ ಶಂಕರ್ ಮಾತುಕತೆ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2019, 19:59 IST
Last Updated 5 ಆಗಸ್ಟ್ 2019, 19:59 IST
   

ಬೆಂಗಳೂರು: ಶಾಸಕ ಸತೀಶ ಜಾರಕಿಹೊಳಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ ಆರ್.ಶಂಕರ ಸೋಮವಾರ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.

ಮೈತ್ರಿ ಸರ್ಕಾರ ಪತನದ ನಂತರ ಭೇಟಿಯಾಗಿರುವುದು ಮಹತ್ವ ಪಡೆದುಕೊಂಡಿದೆ. ಸಚಿವರಾದ ನಂತರ ಖಾತೆ ಹಂಚಿಕೆ ಮಾಡಲು ಸತಾಯಿಸಿದ್ದು, ಮಹತ್ವದ ಖಾತೆ ನೀಡಲು ಹಿಂದೇಟು ಹಾಕಿದ್ದು ರಾಜೀನಾಮೆ ನೀಡಲು ಕಾರಣವಾಯಿತು ಎಂದು ಶಂಕರ್‌ ಸಮಜಾಯಿಷಿ ನೀಡಿದರು ಎನ್ನಲಾಗಿದೆ.

‘ನನ್ನ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯಲ್ಲ. ನಾನಿನ್ನೂ ಶಾಸಕ’ ಎಂದು ಶಂಕರ್‌ ಹೇಳಿಕೊಂಡಿದ್ದಾರೆ. ‘ಮೈತ್ರಿ ಸರ್ಕಾರದ ಜತೆಯಲ್ಲೇ ಇರಬೇಕು ಎಂದುಕೊಂಡಿದ್ದೆ. ಆದರೆ ಕೆಲ ಘಟನೆಗಳಿಂದ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆಯಬೇಕಾಯಿತು. ಸತೀಶ ಜಾರಕಿಹೊಳಿ ನನ್ನ ಬಹಳ ದಿನಗಳಿಂದ ಸ್ನೇಹಿತರು. ಹಾಗಾಗಿ ಭೇಟಿ ಮಾಡಿದ್ದೆ’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.