ADVERTISEMENT

‘ವಿದ್ಯಾಗಮ: ಮೃತಪಟ್ಟ ಶಿಕ್ಷಕರಿಗೆ ಪರಿಹಾರ ನೀಡಿ’

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2020, 21:09 IST
Last Updated 11 ಅಕ್ಟೋಬರ್ 2020, 21:09 IST

ಬೆಂಗಳೂರು: ವಿದ್ಯಾಗಮ ಕಾರ್ಯಕ್ರಮದಡಿ ಕೆಲಸ ಮಾಡುತ್ತಿದ್ದ ವೇಳೆ ಸೋಂಕಿತರಾಗಿ ಸಾವಿಗೀಡಾದ ಶಿಕ್ಷಕರಿಗೆ ಸರ್ಕಾರ ಪರಿಹಾರ ಘೋಷಿಸಬೇಕು. ಸೋಂಕಿತರಾಗಿ ಚಿಕಿತ್ಸೆ ಪಡೆಯುತ್ತಿರುವವರ ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಎಂದುಅಖಿಲಭಾರತ ಶಿಕ್ಷಣ ಉಳಿಸಿ ಸಮಿತಿ ಒತ್ತಾಯಿಸಿದೆ.

ಸೋಂಕಿತ ಶಿಕ್ಷಕರು ಸಂಪೂರ್ಣ ಗುಣಮುಖವಾಗುವವರೆಗೂ ಸಂಬಳ ಸಹಿತ ರಜೆ ನೀಡಬೇಕು ಎಂದು ಸಮಿತಿ ಅಧ್ಯಕ್ಷ ಅಲ್ಲಮಪ್ರಭು ಬೆಟ್ಟದೂರು ಆಗ್ರಹಿಸಿದ್ದಾರೆ.

‘ಎಲ್ಲ ಅತಿಥಿ ಶಿಕ್ಷಕರು ಅಥವಾ ಉಪನ್ಯಾಸಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಕರ್ತವ್ಯದಲ್ಲಿದ್ದಾರೆಂದು ಪರಿಗಣಿಸಿ ಅವರೆಲ್ಲರಿಗೂ ಸರ್ಕಾರ ಜೂನ್‍ನಿಂದ ಶಾಲಾ ಕಾಲೇಜುಗಳು ಆರಂಭವಾಗುವವರೆಗೂಸಂಬಳ ನೀಡಬೇಕು. ಖಾಸಗಿ ಶಾಲಾ–ಕಾಲೇಜುಗಳ ಸಿಬ್ಬಂದಿಗೂ ಸಂಬಳ ನೀಡುವಂತೆಖಾಸಗಿ ಆಡಳಿತ ಮಂಡಳಿಗಳಿಗೆ ನಿರ್ದೇಶನ ನೀಡಬೇಕು.ಇದನ್ನು ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಸಮಿತಿ ಹೇಳಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.