ಅಮಾನತು
ಬೆಂಗಳೂರು: ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025ರ ಸಂಬಂಧ ನಿವಾಸಿಗಳಿಂದ ಮಾಹಿತಿ ಪಡೆಯದೆ ಮನೆಗೆ ಸ್ಟಿಕರ್ ಅಂಟಿಸಿದ ಬಿಬಿಎಂಪಿಯ ಮೂವರು ನೌಕರರನ್ನು ಅಮಾನತು ಮಾಡಲಾಗಿದೆ.
ಎಚ್ಬಿಆರ್ ಲೇಔಟ್ ಉಪ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂದಾಯ ಪರಿವೀಕ್ಷಕ ರಮೇಶ್, ಕಂದಾಯ ವಸೂಲಿಗಾರ ಪೆದ್ದುರಾಜು ಹಾಗೂ ಕೆಂಗೇರಿ ಉಪ ವಿಭಾಗ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂದಾಯ ವಸೂಲಿಗಾರ ಸಿ. ಸಂದಿಲ್ ಕುಮಾರ್ ಅವರನ್ನು ಕರ್ತವ್ಯಲೋಪದ ಮೇರೆಗೆ ಅಮಾನತುಗೊಳಿಸಲಾಗಿದೆ ಎಂದು ಬಿಬಿಎಂಪಿ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.