ದಾಬಸ್ ಪೇಟೆ: ಮುದ್ದಲಿಂಗನಹಳ್ಳಿ ಗೇಟ್ನ ಅಕ್ಷರ ಅಕಾಡೆಮಿ ಆಫ್ ಎಕ್ಸಲೆನ್ಸ್ ಶಾಲೆಗೆ ಸೇರಿದ ವಾಹನ ಚಾಲಕನ ನಿಯಂತ್ರಣ ತಪ್ಪಿ ಒಬಳಾಪುರದ ಗ್ರಾಮದ ಸಮೀಪ ಉರುಳಿ ಬಿದ್ದು ಚಾಲಕ ತಮ್ಮೇಗೌಡ ಎಂಬುವರಿಗೆ ಸಣ್ಣಪುಟ್ಟ ಗಾಯಗಳಾಗಿದೆ.
ಮಂಗಳವಾರ ಸಂಜೆ 5ರ ಸುಮಾರಿಗೆ ಒಬಳಾಪುರ ಗ್ರಾಮದ ಎಲೆಕಲ್ಲು ಬಳಿ ಸ್ಟೇರಿಂಗ್ ಇದ್ದಕ್ಕಿದ್ದ ಹಾಗೆ ಲಾಕ್ ಆಗಿದೆ. ನಿಯಂತ್ರಣ ಕಳೆದುಕೊಂಡ ವಾಹನ ಪಲ್ಟಿ ಹೊಡೆದಿದೆ. ಈ ವೇಳೆ ವಾಹನದಲ್ಲಿ ಮೂವರು ವಿದ್ಯಾರ್ಥಿಗಳು ಇದ್ದರು ಎನ್ನಲಾಗಿದೆ. ಮಕ್ಕಳಿಗೆ ಯಾವುದೇ ರೀತಿಯ ತೊಂದರೆಯಾಗಿಲ್ಲ. ಗಾಯಾಳು ಚಾಲಕನನ್ನು ನೆಲಮಂಗಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.