ADVERTISEMENT

Video| ಪಾದರಾಯನಪುರದಲ್ಲಿ ಸೋಂಕು ಶಂಕಿತರಿಂದ ಗಲಾಟೆ; ಸಿಬ್ಬಂದಿ ಮೇಲೆ ಹಲ್ಲೆ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2020, 4:23 IST
Last Updated 20 ಏಪ್ರಿಲ್ 2020, 4:23 IST

ಬೆಂಗಳೂರು: ಪಾದರಾಯನಪುರದಲ್ಲಿ ಕೊರೊನಾ ಸೋಂಕು ಶಂಕಿತರನ್ನು ಕ್ವಾರಂಟೈನ್‌ ಮಾಡುವ ವೇಳೆ ಕೆಲ ಶಂಕಿತರು ಗಲಾಟೆ ಮಾಡಿದ್ದು, ಬಿಬಿಎಂಪಿ ಹಾಗೂ ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ.

ಆರೋಗ್ಯಾಧಿಕಾರಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಸೀಲ್‌ಡೌನ್‌ ಮಾಡಿದ್ದ ಪಾದರಾಯನಪುರದಲ್ಲಿ ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಹಾಗೂ ಪೆಂಡಾಲ್‌ಗಳನ್ನು ಶಂಕಿತರು ಹಾಗೂ ಅವರ ಕಡೆಯವರು ಧ್ವಂಸ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT